ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆಯನ್ನು ಏ.14ರ ಮಂಗಳವಾರದಂದು ಬೆಳಗ್ಗೆ 10ಕ್ಕೆ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಡಾ|| ಬಿ.ಆರ್. ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸೂಚಿಸಲಾಯಿತು.

ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಅಧ್ಯಕ್ಷರಾದ ಎ. ರಾಮಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಿದ್ದರು..

ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಡಿ.ಎಂ.ರೇಣುಕಾಮೂರ್ತಿ ಮಾತನಾಡಿ, ಸಂವಿಧಾನ ರಚನಾ ಕಮಿಟಿಯಲ್ಲಿ ದೊಡ್ಡಬಳ್ಳಾಪುರದ  ಟಿ.ಎಸ್ ಸಿದ್ದಲಿಂಗಯ್ಯ ಅವರು ಭಾಗಿಯಾಗಿದ್ದರು. ಇದು ನಮಗೆ ಹೆಮ್ಮೆಯ ಸಂಗತಿ. ಅಂಬೇಡ್ಕರ್ ಅವರು ಸಾಧಕ ವ್ಯಕ್ತಿ. ತಾನು ಅನುಭವಿಸಿದ ಜೀವನದ ನೋವುಗಳನ್ನು ಯಾರೂ ಅನುಭವಿಸಬಾರದು ಎಂದು ಸಂವಿಧಾನವನ್ನು ರಚನೆ ಮಾಡಿದರು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಡಿ.ಎಂ.ರೇಣುಕಾಮೂರ್ತಿ ಹೇಳಿದರು.

ಅಂಬೇಡ್ಕರ್ ಖ್ಯಾತ ವಕೀಲರಾಗಿದ್ದವರು, ಅವರ ಹಾದಿಯಲ್ಲಿ ನಾವೆಲ್ಲಾ ನಡೆಯಬೇಕು. ಸಂವಿಧಾನ ನಮಗೆ ರಕ್ಷಣೆ ಕೊಡುತ್ತದೆ. ಸಂವಿಧಾನದಿಂದ ಇಡೀ ವ್ಯವಸ್ಥೆ ನಡೆಯುತ್ತದೆ. ಎಲ್ಲರಿಗೂ ಕಾನೂನು ಅರಿವು ಇರಬೇಕು ಎಂದರು..

ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ಪ್ರಾಂಶುಪಾಲರಾದ ಡಾ. ವೆಂಕಟೇಶ್ ರೆಡ್ಡಿ ಮಾತನಾಡಿ, ಇಂದು ದೇಶದಲ್ಲಿ ನಾವೆಲ್ಲಾ ಸ್ವಾತಂತ್ರ್ಯವಾಗಿ, ಸಂತೋಷವಾಗಿ ಜೀವನ ನಡೆಸುತ್ತಿದ್ದೇವೆ ಅಂದರೆ ಅದಕ್ಕೆ ಅಂಬೇಡ್ಕರ್ ಅವರೇ ಕಾರಣ. ಶಿಕ್ಷಣ, ಸಂಘಟನೆ, ಹೋರಾಟ ಮೂರು ತತ್ವಗಳನ್ನು ಪರಿಚಯಿಸಿದರು ಎಂದು ತಿಳಿಸಿದರು.

ನಿವೃತ್ತ ಪ್ರಾಂಶುಪಾಲ ಮಹಾಬಲೇಶ್ವರ್ ಮಾತನಾಡಿ, ಗಾಂಧಿ, ನೆಹರು‌ ಲಾಲ್ ಪಾಲ್ ಬಾಲ್ ಮಧ್ಯೆ ಅಂಬೇಡ್ಕರ್ ಇದ್ದರು. ಪ್ರಸ್ತುತ ಮಹಾನ್ ನಾಯಕರನ್ನು ಜಾತಿಗೆ ಸೀಮಿತರನ್ನಾಗಿ ಮಾಡಿದ್ದಾರೆ. ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮಾದರಿ. ಈ ದೇಶ ಪಿಟಿಷನ್ ಸ್ವರ್ಗ. ಕೋರ್ಟ್ ಗಳು ತೀರ್ಮಾನ ಮಾಡುತ್ತವೆ ಹೊರೆತು ನ್ಯಾಯ ಕೊಡುವುದಿಲ್ಲ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ ಎಂದು ಹೇಳಿದರು..

ಈ ವೇಳೆ ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಉಪಾಧ್ಯಕ್ಷ ಪಿ.ವಿ. ಶ್ರೀನಿವಾಸಮೂರ್ತಿ, ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್, ಸಹ ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗಿಯಾಗಿದ್ದರು..

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

10 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

10 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

13 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

16 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

18 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

21 hours ago