ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಏ.14ರ ಮಂಗಳವಾರದಂದು ಬೆಳಗ್ಗೆ 10ಕ್ಕೆ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಡಾ|| ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸೂಚಿಸಲಾಯಿತು.
ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಅಧ್ಯಕ್ಷರಾದ ಎ. ರಾಮಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಿದ್ದರು..
ಅಂಬೇಡ್ಕರ್ ಖ್ಯಾತ ವಕೀಲರಾಗಿದ್ದವರು, ಅವರ ಹಾದಿಯಲ್ಲಿ ನಾವೆಲ್ಲಾ ನಡೆಯಬೇಕು. ಸಂವಿಧಾನ ನಮಗೆ ರಕ್ಷಣೆ ಕೊಡುತ್ತದೆ. ಸಂವಿಧಾನದಿಂದ ಇಡೀ ವ್ಯವಸ್ಥೆ ನಡೆಯುತ್ತದೆ. ಎಲ್ಲರಿಗೂ ಕಾನೂನು ಅರಿವು ಇರಬೇಕು ಎಂದರು..
ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ಪ್ರಾಂಶುಪಾಲರಾದ ಡಾ. ವೆಂಕಟೇಶ್ ರೆಡ್ಡಿ ಮಾತನಾಡಿ, ಇಂದು ದೇಶದಲ್ಲಿ ನಾವೆಲ್ಲಾ ಸ್ವಾತಂತ್ರ್ಯವಾಗಿ, ಸಂತೋಷವಾಗಿ ಜೀವನ ನಡೆಸುತ್ತಿದ್ದೇವೆ ಅಂದರೆ ಅದಕ್ಕೆ ಅಂಬೇಡ್ಕರ್ ಅವರೇ ಕಾರಣ. ಶಿಕ್ಷಣ, ಸಂಘಟನೆ, ಹೋರಾಟ ಮೂರು ತತ್ವಗಳನ್ನು ಪರಿಚಯಿಸಿದರು ಎಂದು ತಿಳಿಸಿದರು.
ನಿವೃತ್ತ ಪ್ರಾಂಶುಪಾಲ ಮಹಾಬಲೇಶ್ವರ್ ಮಾತನಾಡಿ, ಗಾಂಧಿ, ನೆಹರು ಲಾಲ್ ಪಾಲ್ ಬಾಲ್ ಮಧ್ಯೆ ಅಂಬೇಡ್ಕರ್ ಇದ್ದರು. ಪ್ರಸ್ತುತ ಮಹಾನ್ ನಾಯಕರನ್ನು ಜಾತಿಗೆ ಸೀಮಿತರನ್ನಾಗಿ ಮಾಡಿದ್ದಾರೆ. ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮಾದರಿ. ಈ ದೇಶ ಪಿಟಿಷನ್ ಸ್ವರ್ಗ. ಕೋರ್ಟ್ ಗಳು ತೀರ್ಮಾನ ಮಾಡುತ್ತವೆ ಹೊರೆತು ನ್ಯಾಯ ಕೊಡುವುದಿಲ್ಲ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ ಎಂದು ಹೇಳಿದರು..
ಈ ವೇಳೆ ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಉಪಾಧ್ಯಕ್ಷ ಪಿ.ವಿ. ಶ್ರೀನಿವಾಸಮೂರ್ತಿ, ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್, ಸಹ ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗಿಯಾಗಿದ್ದರು..
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…