ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆಯನ್ನು ಏ.14ರ ಮಂಗಳವಾರದಂದು ಬೆಳಗ್ಗೆ 10ಕ್ಕೆ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಡಾ|| ಬಿ.ಆರ್. ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸೂಚಿಸಲಾಯಿತು.

ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಅಧ್ಯಕ್ಷರಾದ ಎ. ರಾಮಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಿದ್ದರು..

ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಡಿ.ಎಂ.ರೇಣುಕಾಮೂರ್ತಿ ಮಾತನಾಡಿ, ಸಂವಿಧಾನ ರಚನಾ ಕಮಿಟಿಯಲ್ಲಿ ದೊಡ್ಡಬಳ್ಳಾಪುರದ  ಟಿ.ಎಸ್ ಸಿದ್ದಲಿಂಗಯ್ಯ ಅವರು ಭಾಗಿಯಾಗಿದ್ದರು. ಇದು ನಮಗೆ ಹೆಮ್ಮೆಯ ಸಂಗತಿ. ಅಂಬೇಡ್ಕರ್ ಅವರು ಸಾಧಕ ವ್ಯಕ್ತಿ. ತಾನು ಅನುಭವಿಸಿದ ಜೀವನದ ನೋವುಗಳನ್ನು ಯಾರೂ ಅನುಭವಿಸಬಾರದು ಎಂದು ಸಂವಿಧಾನವನ್ನು ರಚನೆ ಮಾಡಿದರು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಡಿ.ಎಂ.ರೇಣುಕಾಮೂರ್ತಿ ಹೇಳಿದರು.

ಅಂಬೇಡ್ಕರ್ ಖ್ಯಾತ ವಕೀಲರಾಗಿದ್ದವರು, ಅವರ ಹಾದಿಯಲ್ಲಿ ನಾವೆಲ್ಲಾ ನಡೆಯಬೇಕು. ಸಂವಿಧಾನ ನಮಗೆ ರಕ್ಷಣೆ ಕೊಡುತ್ತದೆ. ಸಂವಿಧಾನದಿಂದ ಇಡೀ ವ್ಯವಸ್ಥೆ ನಡೆಯುತ್ತದೆ. ಎಲ್ಲರಿಗೂ ಕಾನೂನು ಅರಿವು ಇರಬೇಕು ಎಂದರು..

ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ಪ್ರಾಂಶುಪಾಲರಾದ ಡಾ. ವೆಂಕಟೇಶ್ ರೆಡ್ಡಿ ಮಾತನಾಡಿ, ಇಂದು ದೇಶದಲ್ಲಿ ನಾವೆಲ್ಲಾ ಸ್ವಾತಂತ್ರ್ಯವಾಗಿ, ಸಂತೋಷವಾಗಿ ಜೀವನ ನಡೆಸುತ್ತಿದ್ದೇವೆ ಅಂದರೆ ಅದಕ್ಕೆ ಅಂಬೇಡ್ಕರ್ ಅವರೇ ಕಾರಣ. ಶಿಕ್ಷಣ, ಸಂಘಟನೆ, ಹೋರಾಟ ಮೂರು ತತ್ವಗಳನ್ನು ಪರಿಚಯಿಸಿದರು ಎಂದು ತಿಳಿಸಿದರು.

ನಿವೃತ್ತ ಪ್ರಾಂಶುಪಾಲ ಮಹಾಬಲೇಶ್ವರ್ ಮಾತನಾಡಿ, ಗಾಂಧಿ, ನೆಹರು‌ ಲಾಲ್ ಪಾಲ್ ಬಾಲ್ ಮಧ್ಯೆ ಅಂಬೇಡ್ಕರ್ ಇದ್ದರು. ಪ್ರಸ್ತುತ ಮಹಾನ್ ನಾಯಕರನ್ನು ಜಾತಿಗೆ ಸೀಮಿತರನ್ನಾಗಿ ಮಾಡಿದ್ದಾರೆ. ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮಾದರಿ. ಈ ದೇಶ ಪಿಟಿಷನ್ ಸ್ವರ್ಗ. ಕೋರ್ಟ್ ಗಳು ತೀರ್ಮಾನ ಮಾಡುತ್ತವೆ ಹೊರೆತು ನ್ಯಾಯ ಕೊಡುವುದಿಲ್ಲ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ ಎಂದು ಹೇಳಿದರು..

ಈ ವೇಳೆ ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಉಪಾಧ್ಯಕ್ಷ ಪಿ.ವಿ. ಶ್ರೀನಿವಾಸಮೂರ್ತಿ, ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್, ಸಹ ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗಿಯಾಗಿದ್ದರು..

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

6 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

23 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago