ಬಾಬು ಜಗಜೀವನ್ ರಾಂ ಅವರದ್ದು ಕ್ರಾಂತಿಕಾರಿ ನಿಲುವು, ಅಭಿವೃದ್ಧಿಯ ಒಲವು-ತಹಶಿಲ್ದಾರ್ ಮೋಹನಕುಮಾರಿ

ಡಾ.ಬಾಬು ಜಗಜೀವನ ರಾಮ್ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿ, ಕ್ರಾಂತಿಕಾರಿಯ ನಿಲುವು ತೆಗೆದುಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್ ಮೋಹನಕುಮಾರಿ ಹೇಳಿದರು.

ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ನಗರದ ಹಳೆ ಬಸ್ ನಿಲ್ದಾಣದಲ್ಲಿರುವ ಬಾಬು ಜಗಜೀವನ್ ರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ಬಣ್ಣಿಸಿದರು.

ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ ರಾಮ್ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಹೇಳಿದರು.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

3 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

3 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

9 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

21 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

21 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

21 hours ago