ಡಾ.ಬಾಬು ಜಗಜೀವನ ರಾಮ್ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿ, ಕ್ರಾಂತಿಕಾರಿಯ ನಿಲುವು ತೆಗೆದುಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್ ಮೋಹನಕುಮಾರಿ ಹೇಳಿದರು.
ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ನಗರದ ಹಳೆ ಬಸ್ ನಿಲ್ದಾಣದಲ್ಲಿರುವ ಬಾಬು ಜಗಜೀವನ್ ರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ಬಣ್ಣಿಸಿದರು.
ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ ರಾಮ್ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…