ಡಾ.ಬಾಬು ಜಗಜೀವನ ರಾಮ್ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿ, ಕ್ರಾಂತಿಕಾರಿಯ ನಿಲುವು ತೆಗೆದುಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್ ಮೋಹನಕುಮಾರಿ ಹೇಳಿದರು.
ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ನಗರದ ಹಳೆ ಬಸ್ ನಿಲ್ದಾಣದಲ್ಲಿರುವ ಬಾಬು ಜಗಜೀವನ್ ರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ಬಣ್ಣಿಸಿದರು.
ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ ರಾಮ್ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…