ಬಾಬು ಜಗಜೀವನ್ ರಾಂ ಅವರದ್ದು ಕ್ರಾಂತಿಕಾರಿ ನಿಲುವು, ಅಭಿವೃದ್ಧಿಯ ಒಲವು-ತಹಶಿಲ್ದಾರ್ ಮೋಹನಕುಮಾರಿ

ಡಾ.ಬಾಬು ಜಗಜೀವನ ರಾಮ್ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿ, ಕ್ರಾಂತಿಕಾರಿಯ ನಿಲುವು ತೆಗೆದುಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್ ಮೋಹನಕುಮಾರಿ ಹೇಳಿದರು.

ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ನಗರದ ಹಳೆ ಬಸ್ ನಿಲ್ದಾಣದಲ್ಲಿರುವ ಬಾಬು ಜಗಜೀವನ್ ರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ಬಣ್ಣಿಸಿದರು.

ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ ರಾಮ್ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ಹೇಳಿದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

6 minutes ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

30 minutes ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

8 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

19 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago