ತನ್ನದೆ ಮನೆಗಾಗಿ ತನ್ನ ಮನೆಯ ಮುಂದೆಯೇ ಪ್ರತಿಭಟನೆ ನಡೆಸುತ್ತಿರುವ ಗೃಹಿಣಿ. ಹದಿನಾಲ್ಕು ವರ್ಷ ಸಂಸಾರ ನಡೆಸಿದ ಮನೆಗೆ ಪ್ರವೇಶ ನೀಡದ ಗಂಡನ ಕಡೆಯವರು. ಬೀದಿಗೆ ಬಂದ ಹೆಣ್ಣು ಮಗಳ ತಾಯಿ.
ಗೃಹಿಣಿಗೆ ಒಂದು ಗಂಡು, ಒಂದು ಹೆಣ್ಣು ಇಬ್ಬರು ಮಕ್ಕಳನ್ನು ಸಾಕುವ ಹೊಣೆ ಹೊತ್ತ ಆಕೆ ಪ್ರತಿಭಟನೆ ದಾರಿ ತುಳಿದಿದ್ದಾಳೆ, ನನ್ನ ಮನೆ.. ನನ್ನ ಹಕ್ಕು..ನನ್ನ ಕಾನೂನು.. ನನ್ನ ಸಂವಿಧಾನ ಅಂತಾ ಬೋರ್ಡ್ ಹಿಡಿದು ಧರಣೆ ಕುಳಿತಿರುವ ಆಕೆ ನ್ಯಾಯಕ್ಕಾಗಿ ಅಂಗಲಾಚುತ್ತಿದ್ದಾಳೆ.
ತನ್ನ ಮನೆಗಾಗಿ ಧರಣಿ ಕೂತಿರುವ ಗೃಹಿಣಿ ಹೆಸರು ಪುಷ್ಪವತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗಾಳಿಪೂಜೆ ಗ್ರಾಮದವರು, ಹದಿನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ಹೆಗಡೆ ನಗರದ ಮುಂಜುನಾಥ್ ಈಕೆಯನ್ನು ಮದುವೆ ಆಗಿದ್ದನು. ಹೆಗಡೆ ನಗರದ 1ನೇ ಕ್ರಾಸ್ ನಲ್ಲಿ ವಾಸವಾಗಿದ್ದರು, ಇವರ ದಾಪಂತ್ಯಕ್ಕೆ ಒಂದು ಹೆಣ್ಣು ಒಂದು ಗಂಡು ಮಗ ಇತ್ತು, ಮಂಜುನಾಥ್ ಸಹೋದರರು ಸಹ ಜೊತೆಯಲ್ಲಿ ವಾಸವಾಗಿದ್ದರು, ಪ್ರಾರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಅಣ್ಣನ ಅಸಹಾಯಕತೆಯನ್ನ ಬಂಡವಾಳ ಮಾಡಿಕೊಂಡ ತಮ್ಮಂದಿರಾದ ಸುರೇಶ್ ಮತ್ತು ಅಂಜಿನಪ್ಪ ಅಣ್ಣ ಮನೆಯನ್ನ ಹೊಡೆಯುವ ಸಂಚು ನಡೆಸಿದ್ದಾರೆ, ಅಣ್ಣನಿಗೆ ಕುಡಿಸಿ ಇಲ್ಲದ ಸಲ್ಲದ ಚಾಡಿ ಹೇಳಿ ಗಂಡ ಹೆಂಡತಿಯರ ನಡುವೆ ವಿರಸ ಮೂಡಿಸಿದ್ದಾರೆ, 20 ಲಕ್ಷ ಹಣಕ್ಕೆ ಮನೆಯನ್ನ ಖರೀದಿ ಮಾಡಿದ್ದಾರೆ, ಆದರೆ 20 ಲಕ್ಷ ಹಣದಲ್ಲಿ ಒಂದು ರೂಪಾಯಿಸ ಸಹ ನಮ್ಮ ಕೈಗೆ ಬಂದಿಲ್ಲ ಎಂಬುದು ಪುಷ್ಪಲತಾರ ಆರೋಪ.
ಮೇ 26 ರಂದು ಸಂಜೆ 6:30 ಸಮಯದಲ್ಲಿ ಪುಷ್ಪಲತಾ ದೇವಸ್ಥಾನಕ್ಕೆ ಹೋಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ಸುರೇಶ್ ಮನೆಯಲ್ಲಿದ್ದ ಸಾಮಾನುಗಳನ್ನು ಬೇರೆಗೆ ಸಾಗಿಸಿದ್ದಾರೆ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂಬ ಆರೋಪ ಸಹ ಇದೆ, ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿರುವಾಗ ಹೇಗೆ ಮನೆಯಲ್ಲಿದ್ದ ಸಾಮಾನುಗಳನ್ನ ಬೇರೆಡೆ ಸಾಗಿಸಿ ಮನೆಗೆ ಬೀಗಿ ಹಾಕಿದ್ದಾರೆಂಬುದು ಪುಷ್ಪಲತಾರ ಪ್ರಶ್ನೆಯಾಗಿದೆ.
ಸದ್ಯ ವಾಸವಾಗಿದ್ದ ಮನೆಯನ್ನ ಕಳೆದು ಕೊಂಡಿರುವ ಪುಷ್ಪಲತಾ ನೆಲೆ ಇಲ್ಲದೆ ಮಕ್ಕಳೊಂದಿಗೆ ಬೀದಿಗೆ ಬಂದಿದ್ದಾರೆ.
ಮಂಜುನಾಥ್ ಮನೆ ಖರೀದಿ ಮಾಡುವಾಗ ಪುಷ್ಪಲತಾರವ ಸಹಿ ಇರ ಬೇಕಿತ್ತು, ಆದರೆ ಮಂಜುನಾಥ್ ರವರ ಸಹಿಯೊಂದಿಗೆ ಖರೀದಿ ಮಾಡಿರೋದು ಅನುಮಾನಕ್ಕೆ ಎಡೆ ಮಾಡಿದೆ, ಮನೆ ಖರೀದಿ ಮಾಡುವಾಗ 20 ಲಕ್ಷ ಹಣವನ್ನ ನಗದು ರೂಪದಲ್ಲಿ ಕೊಟ್ಟಿರುವುದ್ದಾಗಿ ಹೇಳುತ್ತಿರುವುದು ಸಹ ಅನುಮಾನ ಮೂಡಿಸಿದೆ.
ಮನೆಯ ಭಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆ ನಡೆಯುತ್ತಿದೆ, ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಮನೆಯಲ್ಲಿದ್ದ ವಸ್ತುಗಳನ್ನ ಬೇರೆಡೆ ಸಾಗಿಸಿ ಬೀಗ ಹಾಕಿದ್ದಾರೆ, ಮನೆಯ ಬಳಿ ಹೋದರೆ ಹಲ್ಲೆ ನಡೆಸುತ್ತಾರೆ, ಜೀವ ಬೆದರಿಕೆಯನ್ನ ಹಾಕುತ್ತಿದ್ದಾರೆಂದು ಪುಷ್ಪ ಕಣ್ಣೀರು ಹಾಕುತ್ತಿದ್ದಾರೆ, ಮನೆಯನ್ನ ಖರೀದಿ ಮಾಡುವಾಗ ಕೇವಲ ಗಂಡನ ಸಹಿ ಹಾಕಿಸಿದ್ದಾರೆ ವಿನಹಃ ತನ್ನ ಸಹಿಯೇ ಇಲ್ಲದೆ ನಕಲಿ ದಾಖಲೆ ಸೃಷ್ಠಿಸಿ ಮನೆಯನ್ನ ಬರೆಸಿಕೊಂಡಿದ್ದಾರೆಂಬುದು ಪುಷ್ಪಲತಾರ ಆರೋಪವಾಗಿದೆ.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…