ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್ ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.
ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಹಿನ್ನೆಲೆ, ಸ್ಥಳದಲ್ಲಿ ಪಾದಾಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು ಏನೂ ಪ್ರಯೋಜನವಾಗಿಲ್ಲ. ಮನೆಯ ಮುಂದೆ ಕಾಲಿಟ್ಟರೆ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನ ದುರ್ವಾಸನೆಯಿಂದಾಗಿ ಜನರು ಬೇಸತ್ತಿದ್ದಾರೆ. ಮನೆಯ ಮುಂದೆ ಮ್ಯಾನ್ ಹೋಲ್ ನೀರು ಹರಿಯುತ್ತಿರುವ ಕಾರಣ ಸಾವಿರಾರು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದು ಹೀಗೆ ಬಿಟ್ಟರೆ ಎಲ್ಲರಿಗೂ ಕಾಲಯಿಲೆ ಬರುವುದು ಖಚಿತ ಎಂದು ಇಲ್ಲಿನ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…