ಕುಡಿದ ಅಮಲಿನಲ್ಲಿ ಸ್ನೇಹಿತನನ್ನ ಕೊಲೆ ಮಾಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಹಾರೊಬಂಡೆ ಬಳಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತಾಲೂಕಿನ ಹಾರೋಬಂಡೆ ಗ್ರಾಮದ ವಿನೋದ್ ಗೌಡ (22) ಹಾಗೂ ಶಿಡ್ಲಘಟ್ಟ ತಾಲೂಕಿನ ಕೆಜಿ ಹಳ್ಳಿ ಗ್ರಾಮದ ಅಭಿಷೇಕ್ (19) ಎಂದು ತಿಳಿದು ಬಂದಿದೆ.
ಹಾರೋಬಂಡೆ ಗ್ರಾಮದ ಮೃತ ಯುವಕ ಮಾರುತೇಶ್ ಪಂಬ್ಲರ್ ಕೆಲಸ ಮಾಡುತ್ತಿದ್ದನು. ಸ್ನೇಹಿತರಾದ ವಿನೋದ್ ಗೌಡ ಹಾಗೂ ಅಭಿಷೇಕ್ ಜೊತೆಗೆ ಕುಡಿಯಲು ಬಾರ್ ಗೆ ಹೋಗಿದ್ದರು. ಇದೇ ವೇಳೆ ಬಿಲ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದೆ. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.
ಮೃತ ಯುವಕ ಮಾರುತೇಶ್ ವಿನೋದ್ ಗೌಡ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಪ್ರತಿ ಬಾರಿಯೂ ನಾನೇ ಬಿಲ್ ಕಟ್ಟುತ್ತೇನೆ ನೀನು ಕುಡಿದು ಹೋಗುತ್ತೀಯಾ ಕುಂಟಾ ಎಂದು ಕರೆದ ವಿಚಾರಕ್ಕೆ ಕೋಪಗೊಂಡ ವಿನೋದ್ ಗೌಡ ಹಾಗೂ ಅಭಿಷೇಕ್ ಬಾಟಲ್ ನಿಂದ ತಲೆಗೆ ಹೊಡೆದು ಅದೇ ಬಾಟಲಿಯಲ್ಲಿ ಕತ್ತನ್ನು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಜ.29 ರಂದು ಮನೆಯಿಂದ ಹೊರಹೋದ ಮಗ ಎಷ್ಟೊತ್ತಾದರು ಮನೆಗೆ ವಾಪಸ್ ಬಾರದ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ಜ. 31 ರಂದು ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ್ದ ಪೊಲೀಸರು ಮಾರುತೇಶ್ ಕೊಲೆ ಆಗಿರುವುದು ಪತ್ತೆಯಾಗಿದ್ದು, ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಕೇವಲ ದೂರು ದಾಖಲಾದ ಸಮಯದಿಂದ 6 ಗಂಟೆಯ ಒಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…