ಕುಡಿದ ಅಮಲಿನಲ್ಲಿ ಸ್ನೇಹಿತನನ್ನ ಕೊಲೆ ಮಾಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಹಾರೊಬಂಡೆ ಬಳಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತಾಲೂಕಿನ ಹಾರೋಬಂಡೆ ಗ್ರಾಮದ ವಿನೋದ್ ಗೌಡ (22) ಹಾಗೂ ಶಿಡ್ಲಘಟ್ಟ ತಾಲೂಕಿನ ಕೆಜಿ ಹಳ್ಳಿ ಗ್ರಾಮದ ಅಭಿಷೇಕ್ (19) ಎಂದು ತಿಳಿದು ಬಂದಿದೆ.
ಹಾರೋಬಂಡೆ ಗ್ರಾಮದ ಮೃತ ಯುವಕ ಮಾರುತೇಶ್ ಪಂಬ್ಲರ್ ಕೆಲಸ ಮಾಡುತ್ತಿದ್ದನು. ಸ್ನೇಹಿತರಾದ ವಿನೋದ್ ಗೌಡ ಹಾಗೂ ಅಭಿಷೇಕ್ ಜೊತೆಗೆ ಕುಡಿಯಲು ಬಾರ್ ಗೆ ಹೋಗಿದ್ದರು. ಇದೇ ವೇಳೆ ಬಿಲ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದೆ. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.
ಮೃತ ಯುವಕ ಮಾರುತೇಶ್ ವಿನೋದ್ ಗೌಡ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಪ್ರತಿ ಬಾರಿಯೂ ನಾನೇ ಬಿಲ್ ಕಟ್ಟುತ್ತೇನೆ ನೀನು ಕುಡಿದು ಹೋಗುತ್ತೀಯಾ ಕುಂಟಾ ಎಂದು ಕರೆದ ವಿಚಾರಕ್ಕೆ ಕೋಪಗೊಂಡ ವಿನೋದ್ ಗೌಡ ಹಾಗೂ ಅಭಿಷೇಕ್ ಬಾಟಲ್ ನಿಂದ ತಲೆಗೆ ಹೊಡೆದು ಅದೇ ಬಾಟಲಿಯಲ್ಲಿ ಕತ್ತನ್ನು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಜ.29 ರಂದು ಮನೆಯಿಂದ ಹೊರಹೋದ ಮಗ ಎಷ್ಟೊತ್ತಾದರು ಮನೆಗೆ ವಾಪಸ್ ಬಾರದ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ಜ. 31 ರಂದು ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ್ದ ಪೊಲೀಸರು ಮಾರುತೇಶ್ ಕೊಲೆ ಆಗಿರುವುದು ಪತ್ತೆಯಾಗಿದ್ದು, ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಕೇವಲ ದೂರು ದಾಖಲಾದ ಸಮಯದಿಂದ 6 ಗಂಟೆಯ ಒಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…