ಬಾರ್ ನಲ್ಲಿ ಬಿಲ್ ಕಟ್ಟುವ ವಿಚಾರಕ್ಕೆ ಸ್ನೇಹಿತರಿಂದಲೇ ಗೆಳೆಯನ ಕೊಲೆ: ಇಬ್ಬರು ಆರೋಪಿಗಳ ಸೆರೆ

ಕುಡಿದ ಅಮಲಿನಲ್ಲಿ ಸ್ನೇಹಿತನನ್ನ ಕೊಲೆ ಮಾಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಹಾರೊಬಂಡೆ ಬಳಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತಾಲೂಕಿನ ಹಾರೋಬಂಡೆ ಗ್ರಾಮದ ವಿನೋದ್ ಗೌಡ (22) ಹಾಗೂ ಶಿಡ್ಲಘಟ್ಟ ತಾಲೂಕಿನ ಕೆಜಿ ಹಳ್ಳಿ ಗ್ರಾಮದ ಅಭಿಷೇಕ್ (19) ಎಂದು ತಿಳಿದು ಬಂದಿದೆ.

ಹಾರೋಬಂಡೆ ಗ್ರಾಮದ ಮೃತ ಯುವಕ ಮಾರುತೇಶ್ ಪಂಬ್ಲರ್ ಕೆಲಸ ಮಾಡುತ್ತಿದ್ದನು. ಸ್ನೇಹಿತರಾದ ವಿನೋದ್ ಗೌಡ ಹಾಗೂ ಅಭಿಷೇಕ್ ಜೊತೆಗೆ ಕುಡಿಯಲು ಬಾರ್ ಗೆ ಹೋಗಿದ್ದರು. ಇದೇ ವೇಳೆ ಬಿಲ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದೆ. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

ಮೃತ ಯುವಕ ಮಾರುತೇಶ್ ವಿನೋದ್ ಗೌಡ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಪ್ರತಿ ಬಾರಿಯೂ ನಾನೇ ಬಿಲ್ ಕಟ್ಟುತ್ತೇನೆ ನೀನು ಕುಡಿದು ಹೋಗುತ್ತೀಯಾ ಕುಂಟಾ ಎಂದು ಕರೆದ ವಿಚಾರಕ್ಕೆ ಕೋಪಗೊಂಡ ವಿನೋದ್ ಗೌಡ ಹಾಗೂ ಅಭಿಷೇಕ್ ಬಾಟಲ್ ನಿಂದ ತಲೆಗೆ ಹೊಡೆದು ಅದೇ ಬಾಟಲಿಯಲ್ಲಿ ಕತ್ತನ್ನು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಜ.29 ರಂದು ಮನೆಯಿಂದ ಹೊರಹೋದ ಮಗ ಎಷ್ಟೊತ್ತಾದರು ಮನೆಗೆ ವಾಪಸ್ ಬಾರದ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ಜ. 31 ರಂದು ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ್ದ ಪೊಲೀಸರು ಮಾರುತೇಶ್ ಕೊಲೆ ಆಗಿರುವುದು ಪತ್ತೆಯಾಗಿದ್ದು, ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಕೇವಲ ದೂರು ದಾಖಲಾದ ಸಮಯದಿಂದ 6 ಗಂಟೆಯ ಒಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

12 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago