ಬಾಲಕಾರ್ಮಿಕರನ್ನು ರಕ್ಷಿಸಲು ಹೆಚ್ಚು ಹೆಚ್ಚು ಅನಿರೀಕ್ಷಿತ ದಾಳಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ ಪುನರ್ವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್‌ ಸಮಿತಿಗಳನ್ನು ರಚಿಸಲಾಗಿದ್ದು, ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಸೂಚನೆ ನೀಡಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಬಾಲ ಕಾರ್ಮಿಕ ಪದ್ದತಿ ನಿವಾರಣೆ ಕುರಿತು ನಡೆದ ಸಭೆಯಲ್ಲಿ ‌ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಗೆ ಹೊಂದಿಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು ಹೆಚ್ಚಾಗಿರುವುದರಿಂದ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ ಇಲಾಖೆ ಸೇರಿದಂತೆ ಒಟ್ಟು 11 ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಅನಿರೀಕ್ಷಿತ ದಾಳಿ,ತಪಾಸಣೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಲು ಕಾರ್ಮಿಕ ಇಲಾಖೆಗೆ ಸಹಕರಿಸುವಂತೆ ಹಾಗೂ ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಶಾಲೆಗೆ ದಾಖಲು ಮಾಡುವ ಮೂಲಕ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಗಳ ವರೆಗೆ ಹೆಚ್ಚಿಸಬಹುದಾದಂತಹ ದಂಡ ಅಥವಾ ಎರಡನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದರು.

ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯ ವೇಳೆ ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು, ಆಟೊ ಪ್ರಚಾರ ಕಾರ್ಯಕ್ರಮಗಳನ್ನು, ಬೀದಿ ನಾಟಕಗಳನ್ನು, ಗೋಡೆ ಬರಹಗಳನ್ನು, ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು, ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕ್ಕೆ ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ. ಹೆಚ್.ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಶ್ರೀಕಂಠ.ಎನ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕಿ ಹೇಮಾವತಿ.ಜೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್.ಎಸ್ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ನಾಲ್ಕು ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರು ಸೇರಿದಂತೆ ಮತ್ತಿತರು ಹಾಜರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

2 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

4 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

16 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

17 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

19 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

21 hours ago