ಹುಲಿಯೂರು ದುರ್ಗಾ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೋಕ್ಸೋ ನ್ಯಾಯಾಲಯ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 2 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ರಾಮಚಂದ್ರಯ್ಯ (55), ಹೊಸವೀರಾಮಯ್ಯ (60) ಮತ್ತು ವೆಂಕಟೇಶಯ್ಯ (40) ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ. ಬಾಲಕಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದು ಬಂದಿತ್ತು.
ಈ ಕುರಿತು ಕುಣಿಗಲ್ ತಾಲೂಕು ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ರಾಮಚಂದ್ರಯ್ಯ ಬೆಳಗಿನ ಉಪಾಹಾರಕ್ಕೆ ಹಣ ನೀಡುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನು ಕಂಡ ಹೊಸವೀರಾಮಯ್ಯ ಊರಿನವರಿಗೆ ತಿಳಿಸುವುದಾಗಿ ಬೆದರಿಸಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನು ಗಮನಿಸಿದ ಮತ್ತೋರ್ವ ಆರೋಪಿ ವೆಂಕಟೇಶಯ್ಯನೂ ಕೂಡ ಬಾಲಕಿ ಮೇಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಹುಲಿಯೂರುದುರ್ಗ ತನಿಖಾಧಿಕಾರಿ ಎ.ಎನ್. ಅಶೋಕ್ ಕುಮಾರ್ ಪ್ರಕರಣದ ತನಿಖೆ ನಡೆಸಿದಾಗ, ಈ ಎಲ್ಲ ವಿಷಯಗಳು ಬೆಳಕಿಗೆ ಬಂದಿವೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ ಅಪರಾಧಿಗಳಿಗೆ ಶಿಕ್ಷೆ ವಿಧಿಸಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಲಕಿಗೆ 10 ಲಕ್ಷ ರೂ. ಸೇರಿದಂತೆ ಒಟ್ಟು 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…