ಕರ್ನೂಲ್ ಜಿಲ್ಲೆಯ ಆದೋನಿ ಮಂಡಲದ ಎಸ್ ನಿರ್ಮಲಾ ಅವರು ಬಾಲ್ಯವಿವಾಹದಿಂದ ಪಾರಾದ ನಂತರ ಇಂಟರ್ ಮೀಡಿಯೇಟ್ ಪ್ರಥಮ ವರ್ಷದ ಪರೀಕ್ಷೆಯಲ್ಲಿ 440 ರಲ್ಲಿ 421 ಅಂಕಗಳನ್ನು ಗಳಿಸುವ ಮೂಲಕ ಅತ್ಯುತ್ತಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ನಿರ್ಮಲಾ ಅವರು ಆದೋನಿ ಶಾಸಕ ವೈ.ಸಾಯಿ ಪ್ರಸಾದ್ ರೆಡ್ಡಿ ಅವರನ್ನು ಸಂಪರ್ಕಿಸಿ, ಜಿಲ್ಲಾಧಿಕಾರಿ ಜಿ.ಸೃಜನಾ ಅವರ ನೆರವಿನಿಂದ ಆಕೆಯನ್ನು ಬಾಲ್ಯವಿವಾಹದಿಂದ ರಕ್ಷಿಸಿ ಆಸ್ಪರಿನಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಕ್ಕೆ ಸೇರಿಸಿದ್ದಾರೆ.
ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದು ತನ್ನನ್ನು ತಾನು ಸಾಬೀತುಪಡಿಸಿಕೊಂಡಿದ್ದಾರೆ. ಕಳೆದ ವರ್ಷ ಎಸ್ಎಸ್ಸಿಯಲ್ಲಿ 537 ಅಂಕ ಗಳಿಸಿದ್ದಳು.
ನಿರ್ಮಲಾ ಅವರ ಪೋಷಕರು ನಾಲ್ಕು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ, ಅವರಲ್ಲಿ ಮೂವರು ಈಗಾಗಲೇ ಮದುವೆಯಾಗಿದ್ದಾರೆ, ಆರ್ಥಿಕ ತೊಂದರೆಗಳನ್ನು ಉಲ್ಲೇಖಿಸಿ ನಿರ್ಮಲಾಳನ್ನೂ ಮದುವೆಯಾಗಲು ಒತ್ತಾಯಿಸಿದ್ದರು ಎನ್ನಲಾಗಿದೆ.
ತಾನು ಐಪಿಎಸ್ ಅಧಿಕಾರಿಯಾಗಬೇಕು ಮತ್ತು ಬಾಲ್ಯವಿವಾಹ ನಿರ್ಮೂಲನೆಗೆ ಕೆಲಸ ಮಾಡುತ್ತೇನೆ ಎಂದು ಯುವತಿ ನಿರ್ಮಲಾ ಅವರು ತಿಳಿಸಿದ್ದಾರೆ
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…