ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ ಗೌರವಾನ್ವಿತ 5 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಲಕ್ಷ್ಮಣ ರಾಮು ಕುರಣಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಸಮಿತಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಇಲಾಖೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ದೇವನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2025” ರ ಪ್ರಯುಕ್ತ ‘ಕಾನೂನು ಅರಿವು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದಲ್ಲಿ ಮಕ್ಕಳಿಗಾಗಿ ಇರುವ ಕಾಯ್ದೆಗಳು, ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಮಕ್ಕಳು ಶಿಕ್ಷಣ ಪಡೆಯುವಾಗ ಅಲಕ್ಷ್ಯ ಮಾಡದೇ, ಶ್ರದ್ಧೆಯಿಂದ ಕಲಿತರ ಮಾತ್ರವೇ ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಿದೆ, ಇದಲ್ಲದೆ ಮಕ್ಕಳನ್ನು ಅಪಹರಣ ಮಾಡಿ ಭಿಕ್ಷಾಟನೆಗೆ ಅಥವಾ ಇತರೆ ಚಟುವಟಿಕೆಗಳಾದ ಅಂಗಡಿಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುವುದು, ಇಂತಹ ಘಟನೆಗಳನ್ನು ಸಾರ್ವಜನಿಕರು ಗಮನಿಸಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ಮಾಹಿತಿ ನೀಡಿ ಅಥವಾ ಸ್ಥಳೀಯ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ತಿಳಿಸಿದರು.
ಈ ವೇಳೆ ದೇವನಹಳ್ಳಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್ ಅವರು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.
*ರಸ ಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ*
ಕಾರ್ಯಕ್ರಮದ ವೇದಿಕೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಪ್ರಥಮ ಬಹುಮಾನ ಸಿಂಚನ ಮತ್ತು ಮೌಲ ಶ್ರೀ ಶಾರದಾ ಪ್ರೌಢಶಾಲೆ ದೊಡ್ಡಬಳ್ಳಾಪುರ,
ದ್ವಿತೀಯ ಬಹುಮಾನ ಹಿಂಜಾಮುಲ್ ಮತ್ತು ಜಗದೀಶ್ ಸರ್ಕಾರಿ ಜೂನಿಯರ್ ಶಾಲೆ ದೇವನಹಳ್ಳಿ ,
ತೃತೀಯ ಬಹುಮಾನ ಸಂತೋಷ್ ಮತ್ತು ರುದ್ರೇಶ್ ಶ್ರೀನಿವಾಸ ಪ್ರೌಢಶಾಲೆ ನೆಲಮಂಗಲ.
ಕಾರ್ಯಕ್ರಮದಲ್ಲಿ ದೇವನಹಳ್ಳಿ ತಾಲ್ಲೂಕಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಪ್ರವೀಣ್ ನಾಯಕ್, ದೇವನಹಳ್ಳಿ ತಾಲ್ಲೂಕಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ವೆಂಕಟೇಶ್ ಎನ್, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಎಸ್.ಎಲ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ರಮೇಶ್ ಬಿ.ಆರ್, ದೇವನಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಹೆಚ್.ಸಿ ಬಾಲಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ, ದೇವನಹಳ್ಳಿ ತಾಲ್ಲೂಕಿನ ವಕೀಲರ ಸಂಘದ ಅಧ್ಯಕ್ಷರು ಎಂ.ಆರ್ ಮುನಿರಾಜು, ಜೊತೆಗೆ ಜಿಲ್ಲೆಯ ನಾಲ್ಕು ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಸಿಬ್ಬಂದಿಗಳು ಹಾಗೂ ವಿವಿಧ ಪ್ರೌಢಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…