ಸ್ನೇಹಿತರ ಜೊತೆ ಬಾವಿಯಲ್ಲಿ ಈಜಾಡಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಬನಾವತಿ ಗ್ರಾಮದಲ್ಲಿ ನಡೆದಿದೆ.
ಮಧ್ಯಾಹ್ನದ ಬೇಸಿಗೆ ಬೇಗೆ ತಣಿಸಿಕೊಳ್ಳಲು ಬಾವಿಗೆ ಈಜಲು ಹೋದ ಯುವಕ, ನೀರಲ್ಲಿ ಮುಳುಗಿ ಅಸುನೀಗಿದ್ದಾನೆ. ಆರೂಡಿ ಗ್ರಾಮದ ನರಸಿಂಹರಾಜ್(22), ಮೃತ ಯುವಕ.
ಸಂಜೆ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಹೊಸಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೃತ ದೇಹ ಹೊರತೆಗೆದಿದ್ದಾರೆ.
ಒಂದು ವರ್ಷದ ಹಿಂದೆ ಅಪಘಾತದಲ್ಲಿ ನರಸಿಂಹರಾಜ್ ಸಹೋದರ ಕಾರ್ತಿಕ್ ಸಾವನ್ನಪ್ಪಿದ್ದರು, ಇಬ್ಬರು ಪುತ್ರರನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ ತಂದೆ ನರಸಿಂಹಮೂರ್ತಿ, ತಾಯಿ ಮಂಜಮ್ಮ.
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…