ಸ್ನೇಹಿತರ ಜೊತೆ ಬಾವಿಯಲ್ಲಿ ಈಜಾಡಲು ಹೋಗಿ ಈಜು ಬಾರದೇ ನೀರಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ಯುವಕ ದೊಡ್ಡಬಳ್ಳಾಪುರ ಕರೇನಹಳ್ಳಿ ನಿವಾಸಿ ತೇಜಸ್(22) ಎಂದು ಗುರುತಿಸಲಾಗಿದೆ. ಮೃತ ಯುವಕ ಬಿಕಾಂ ಓದುತ್ತಿದ್ದ ಎಂದು ತಿಳಿದು ಬಂದಿದೆ.
ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆಯೊಂದರ ಸಮೀಪದ ಸುಮಾರು 15 ಅಡಿ ನೀರಿದ್ದ ಬಾವಿಯಲ್ಲಿ ಈಜಾಡಲು ದೊಡ್ಡಬಳ್ಳಾಪುರದಿಂದ ಸುಮಾರು 6 ಮಂದಿ ಸ್ನೇಹಿತರ ಜೊತೆಗೂಡಿ ಬಂದಿದ್ದು, 6 ಮಂದಿಯು ಬಾವಿಗೆ ಧುಮುಕಿ ಈಜಾಡುತ್ತಿದ್ದರು. ದಿಢೀರನೆ ಮಳೆ ಬಂದಿದ್ದರಿಂದ 5 ಮಂದಿ ಯುವಕರು ಬಾವಿಯಿಂದ ದಡಕ್ಕೆ ಬಂದಿದ್ದಾರೆ. ಒಬ್ಬ ಮಾತ್ರ ಬಾವಿಯ ತಳಕ್ಕೆ ಹೋಗಿ ಜೇಡಿಮಣ್ಣಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…