ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಹಾಗೂ ನಗರಸಭೆಯು ಚುನಾವಣೆಗೆ ಪೂರಕ ವ್ಯವಸ್ಥೆಯನ್ನು ಕಲ್ಪಿಸಿದ ಪರಿಣಾಮ ಚುನಾವಣೆ ಯಾವುದೇ ಸಮಸ್ಯೆಯಿಲ್ಲಿದೆ ಪೂರ್ಣಗೊಂಡಿದೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಮತದಾನ ಪೂರ್ಣಗೊಂಡಿದೆ. ಚುನಾವಣೆಯಲ್ಲಿ ಮತದಾರರು ಅತ್ಯಂತ ಹೆಚ್ಚು ಉತ್ಸುಕರಾಗಿ ಭಾಗವಹಿಸಿದ್ದಾರೆ. ಪಟ್ಟಣ ಪಂಚಾಯಿತಿಯಲ್ಲಿ ಶೇ.78.45ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಬೆಳಿಗ್ಗೆ ನಿಧಾನವಾಗಿ ನಡೆದ ಮತದಾನ ನಂತರ ಮತದಾನ ಚುರುಕುಗೊಂಡಿದೆ. ಭಾನುವಾರ 12 ಗಂಟೆ ಬಳಿಕ ಮತದಾನ ವೇಗ ಪಡೆದುಕೊಂಡಿದ್ದು, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಿದ್ದಾರೆ.

ನಕಲಿ ಮತದಾನಕ್ಕೆ ಯತ್ನ, ಪೊಲೀಸ್ ವಶಕ್ಕೆ

ಬಾಶೆಟ್ಟಿಹಳ್ಳಿ ಪಪಂ ವಾರ್ಡ್ ನಂ.17ರಲ್ಲಿ ವ್ಯಕ್ತಿಯೋರ್ವ ನಕಲಿ ಮತದಾನಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬೂತ್ ಏಜೆಂಟರು ವ್ಯಕ್ತಿಯ ಗುರುತು ರುಜುಪಡಿಸಿದ ಕಾರಣ ವ್ಯಕ್ತಿಯನ್ನು ಮತದಾನ ಕೇಂದ್ರದಿಂದ ಹೊರ ಕಳುಹಿಸಿ, ಪೊಲೀಸ್ ವಶಕ್ಕೆ ನೀಡಲಾಯಿತು.

ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ಪಟ್ಟಣ ಪಂಚಾಯತಿ ಚುನಾವಣೆಯ ನಾಗದೇನಹಳ್ಳಿ ಮತಗಟ್ಟೆಯಲ್ಲಿ ನೇಮಿಸಿದ್ದ ಶಿಕ್ಷಕನೋರ್ವ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಮದ್ಯದ ಅಮಲಿನಲ್ಲಿ ಬಂದಿದ್ದ ಶಿಕ್ಷಕನನ್ನ ಪೊಲೀಸರ ವಶಕ್ಕೆ ಚುನಾವಣಾಧಿಕಾರಿಗಳು ನೀಡಿದ್ದಾರೆ.

ಭಾನುವಾರ ಬೆಳಗ್ಗೆ 7 ಗಂಟೆಯಿಂದಲೇ ಚುನಾವಣಾ ಮತದಾನ ಪ್ರಕ್ರಿಯೆಯಲ್ಲಿ ಕಾರ್ಯಪ್ರವೃತ್ತರಾಗಿದ್ದ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಲ್ಲಾ ಮತಗಟ್ಟೆಗಳಲ್ಲಿನ ವ್ಯವಸ್ಥೆಗಳನ್ನ ಪರಿಶೀಲನೆ ನಡೆಸಿದರು.

ಮತಗಟ್ಟೆ ಬಳಿ ಹಾಕಲಾಗಿದ್ದ ಶಾಮಿಯಾನ, ಪೆಂಡಾಲ್‌ಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಚುನಾವಣೆಯ ನೀತಿ ಸಂಹಿತೆಗಳನ್ನ ಪಾಲಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಿದರು. ಜತೆಗೆ ಪಪಂ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ನಿರ್ದಿಷ್ಟ ಸೂಚನೆ ನೀಡಿದ್ದಾರೆ. ಜತೆಗೆ ಎಸಿ ದುರ್ಗಾಶ್ರೀ, ತಹಶೀಲ್ದಾರ್ ಮಲ್ಲಪ್ಪ ಅವರು ಕೂಡ ವಿವಿಧ ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

ಡಿ.24ಕ್ಕೆ ಮತ ಎಣಿಕೆ

ಭಾನುವಾರ ನಡೆದ ಬಾಶೆಟ್ಟಿಹಳ್ಳಿ ಚುನಾವಣೆಯ ಮತದಾನದ ಮತಗಳನ್ನು ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಮತಪೆಟ್ಟಿಗೆಗಳು ಭದ್ರವಾಗಿ ಇಡಲಾಗಿದ್ದು, ಭದ್ರತೆಗೆ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಡಿ.24 ಬುಧವಾರದಂದು ಕೊಂಗಾಡಿಯಪ್ಪ ಕಾಲೇಜಿನಲ್ಲಿಯೇ ಮತ ಎಣಿಕೆ ನಡೆಯಲಿದೆ.

Ramesh Babu

Journalist

Recent Posts

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

9 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

10 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

10 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

17 hours ago

ಅನ್ನದಾತ ಅನಾಥನಾಗುವ ಮುನ್ನ……. ಅನ್ನಕ್ಕಾಗಿ ನಾವು ಪರದಾಡುವ ಮುನ್ನ……

ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…

21 hours ago

ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ: 6087238ರೂ. ಕಾಣಿಕೆ‌ ಸಂಗ್ರಹ

ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಇಂದು (ಶನಿವಾರ) ಹುಂಡಿ ಕಾಣಿಕೆ ಎಣಿಕೆ ಕಾರ್ಯ…

1 day ago