ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಹಾಗೂ ನಗರಸಭೆಯು ಚುನಾವಣೆಗೆ ಪೂರಕ ವ್ಯವಸ್ಥೆಯನ್ನು ಕಲ್ಪಿಸಿದ ಪರಿಣಾಮ ಚುನಾವಣೆ ಯಾವುದೇ ಸಮಸ್ಯೆಯಿಲ್ಲಿದೆ ಪೂರ್ಣಗೊಂಡಿದೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಮತದಾನ ಪೂರ್ಣಗೊಂಡಿದೆ. ಚುನಾವಣೆಯಲ್ಲಿ ಮತದಾರರು ಅತ್ಯಂತ ಹೆಚ್ಚು ಉತ್ಸುಕರಾಗಿ ಭಾಗವಹಿಸಿದ್ದಾರೆ. ಪಟ್ಟಣ ಪಂಚಾಯಿತಿಯಲ್ಲಿ ಶೇ.78.45ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಬೆಳಿಗ್ಗೆ ನಿಧಾನವಾಗಿ ನಡೆದ ಮತದಾನ ನಂತರ ಮತದಾನ ಚುರುಕುಗೊಂಡಿದೆ. ಭಾನುವಾರ 12 ಗಂಟೆ ಬಳಿಕ ಮತದಾನ ವೇಗ ಪಡೆದುಕೊಂಡಿದ್ದು, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಿದ್ದಾರೆ.

ನಕಲಿ ಮತದಾನಕ್ಕೆ ಯತ್ನ, ಪೊಲೀಸ್ ವಶಕ್ಕೆ

ಬಾಶೆಟ್ಟಿಹಳ್ಳಿ ಪಪಂ ವಾರ್ಡ್ ನಂ.17ರಲ್ಲಿ ವ್ಯಕ್ತಿಯೋರ್ವ ನಕಲಿ ಮತದಾನಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬೂತ್ ಏಜೆಂಟರು ವ್ಯಕ್ತಿಯ ಗುರುತು ರುಜುಪಡಿಸಿದ ಕಾರಣ ವ್ಯಕ್ತಿಯನ್ನು ಮತದಾನ ಕೇಂದ್ರದಿಂದ ಹೊರ ಕಳುಹಿಸಿ, ಪೊಲೀಸ್ ವಶಕ್ಕೆ ನೀಡಲಾಯಿತು.

ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ಪಟ್ಟಣ ಪಂಚಾಯತಿ ಚುನಾವಣೆಯ ನಾಗದೇನಹಳ್ಳಿ ಮತಗಟ್ಟೆಯಲ್ಲಿ ನೇಮಿಸಿದ್ದ ಶಿಕ್ಷಕನೋರ್ವ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಮದ್ಯದ ಅಮಲಿನಲ್ಲಿ ಬಂದಿದ್ದ ಶಿಕ್ಷಕನನ್ನ ಪೊಲೀಸರ ವಶಕ್ಕೆ ಚುನಾವಣಾಧಿಕಾರಿಗಳು ನೀಡಿದ್ದಾರೆ.

ಭಾನುವಾರ ಬೆಳಗ್ಗೆ 7 ಗಂಟೆಯಿಂದಲೇ ಚುನಾವಣಾ ಮತದಾನ ಪ್ರಕ್ರಿಯೆಯಲ್ಲಿ ಕಾರ್ಯಪ್ರವೃತ್ತರಾಗಿದ್ದ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಲ್ಲಾ ಮತಗಟ್ಟೆಗಳಲ್ಲಿನ ವ್ಯವಸ್ಥೆಗಳನ್ನ ಪರಿಶೀಲನೆ ನಡೆಸಿದರು.

ಮತಗಟ್ಟೆ ಬಳಿ ಹಾಕಲಾಗಿದ್ದ ಶಾಮಿಯಾನ, ಪೆಂಡಾಲ್‌ಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಚುನಾವಣೆಯ ನೀತಿ ಸಂಹಿತೆಗಳನ್ನ ಪಾಲಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಿದರು. ಜತೆಗೆ ಪಪಂ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ನಿರ್ದಿಷ್ಟ ಸೂಚನೆ ನೀಡಿದ್ದಾರೆ. ಜತೆಗೆ ಎಸಿ ದುರ್ಗಾಶ್ರೀ, ತಹಶೀಲ್ದಾರ್ ಮಲ್ಲಪ್ಪ ಅವರು ಕೂಡ ವಿವಿಧ ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

ಡಿ.24ಕ್ಕೆ ಮತ ಎಣಿಕೆ

ಭಾನುವಾರ ನಡೆದ ಬಾಶೆಟ್ಟಿಹಳ್ಳಿ ಚುನಾವಣೆಯ ಮತದಾನದ ಮತಗಳನ್ನು ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಮತಪೆಟ್ಟಿಗೆಗಳು ಭದ್ರವಾಗಿ ಇಡಲಾಗಿದ್ದು, ಭದ್ರತೆಗೆ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಡಿ.24 ಬುಧವಾರದಂದು ಕೊಂಗಾಡಿಯಪ್ಪ ಕಾಲೇಜಿನಲ್ಲಿಯೇ ಮತ ಎಣಿಕೆ ನಡೆಯಲಿದೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

9 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

10 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

10 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

12 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

16 hours ago