ಬಾಶೆಟ್ಟಿಹಳ್ಳಿಯಲ್ಲಿ ಬಸ್ ತಂಗುದಾಣ ನಿರ್ಮಿಸಲು ಮನವಿ

 

ತಾಲೂಕಿನ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ತಂಗುದಾಣ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಯುವ ಶಕ್ತಿ ಕರ್ನಾಟಕ ಸದಸ್ಯರು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಬಾಶೆಟ್ಟಿಹಳ್ಳಿ ಮೂಲಕ ಬೆಂಗಳೂರು- ಹಿಂದೂಪುರ ರಾಷ್ಟ್ರೀಯ ಹೆದ್ದಾರಿ‌ ಹಾದು ಹೋಗಿದ್ದು, ಬೆಂಗಳೂರು, ಹಿಂದೂಪುರ, ದೊಡ್ಡಬಳ್ಳಾಪುರ ನಗರ, ಗೌರಿಬಿದನೂರು ಸೇರಿದಂತೆ ವಿವಿಧ ಕಡೆ ತೆರಳಲು ಸಾಕಷ್ಟು ಪ್ರಯಾಣಿಕರು ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ಯಾವುದೇ ಸುಸಜ್ಜಿತ ತಂಗುದಾಣ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಆದ್ದರಿಂದ ಪ್ರಯಾಣಿಕರಿಗಾಗಿ ಸೂಕ್ತ ತಂಗುದಾಣದ ವ್ಯವಸ್ಥೆ ಮಾಡಬೇಕೆಂದು ಯುವ ಶಕ್ತಿ ಕರ್ನಾಟಕ ಸದಸ್ಯರು ಒತ್ತಾಯಿಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹೆದ್ದಾರಿಯಲ್ಲಿಯೇ ಸರ್ಕಾರಿ ಹಾಗೂ ಖಾಸಗಿ ಬಸ್ಸಿಗಾಗಿ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ. ದೂರದ ಊರುಗಳಿಗೆ ಪ್ರಯಾಣಿಸುವವರು ಸರ್ಕಾರಿ ಬಸ್ಸು ಮತ್ತು ಖಾಸಗಿ ವಾಹನಕ್ಕಾಗಿ ಉರಿಬಿಸಿಲು, ಸುರಿವ ಮಳೆಯಲ್ಲಿ ಹೆದ್ದಾರಿಯ ಬದಿಯಲ್ಲಿ ನಿಲ್ಲುತ್ತಿದ್ದಾರೆ. ಇದರಿಂದಾಗಿ ಹೆದ್ದಾರಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಅಧಿಕವಾಗಿದೆ. ತಂಗುದಾಣ ಇಲ್ಲದ ಕಾರಣ ಕೆಲ ಬಸ್ ಗಳು ಎಲ್ಲೆಂದರಲ್ಲಿ ನಿಲ್ಲಿಸುತ್ತವೆ, ಕೆಲವೊಮ್ಮೆ ನಿಲುಗಡೆ ಮಾಡದೆ ಹೊರಟು ಹೋಗುತ್ತವೆ. ಇದೊಂದು ಸಾರ್ವಜನಿಕ ಸಮಸ್ಯೆಯೆಂದು ಪರಿಗಣಿಸಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶೀಘ್ರವಾಗಿ ವ್ಯವಸ್ಥಿತವಾದ ಬಸ್ ತಂಗುದಾಣದ ವ್ಯವಸ್ಥೆಯನ್ನ ಕಲ್ಪಿಸಿಕೊಡಬೇಕಾಗಿ ಆಗ್ರಹಿಸಿದರು.

ಈ ವೇಳೆ ಶಿವಕುಮಾರ್, ಅಮರ್, ಪುನೀತ್, ಸರಸ್ವತಿ, ಮೇಘನಾ, ಅಭಿ, ಮಹೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

35 minutes ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

3 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

8 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

9 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

10 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

20 hours ago