ಬಾಶೆಟ್ಟಿಹಳ್ಳಿಯಲ್ಲಿ ಬಸ್ ತಂಗುದಾಣ ನಿರ್ಮಿಸಲು ಮನವಿ

 

ತಾಲೂಕಿನ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ತಂಗುದಾಣ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಯುವ ಶಕ್ತಿ ಕರ್ನಾಟಕ ಸದಸ್ಯರು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಬಾಶೆಟ್ಟಿಹಳ್ಳಿ ಮೂಲಕ ಬೆಂಗಳೂರು- ಹಿಂದೂಪುರ ರಾಷ್ಟ್ರೀಯ ಹೆದ್ದಾರಿ‌ ಹಾದು ಹೋಗಿದ್ದು, ಬೆಂಗಳೂರು, ಹಿಂದೂಪುರ, ದೊಡ್ಡಬಳ್ಳಾಪುರ ನಗರ, ಗೌರಿಬಿದನೂರು ಸೇರಿದಂತೆ ವಿವಿಧ ಕಡೆ ತೆರಳಲು ಸಾಕಷ್ಟು ಪ್ರಯಾಣಿಕರು ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ಯಾವುದೇ ಸುಸಜ್ಜಿತ ತಂಗುದಾಣ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಆದ್ದರಿಂದ ಪ್ರಯಾಣಿಕರಿಗಾಗಿ ಸೂಕ್ತ ತಂಗುದಾಣದ ವ್ಯವಸ್ಥೆ ಮಾಡಬೇಕೆಂದು ಯುವ ಶಕ್ತಿ ಕರ್ನಾಟಕ ಸದಸ್ಯರು ಒತ್ತಾಯಿಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹೆದ್ದಾರಿಯಲ್ಲಿಯೇ ಸರ್ಕಾರಿ ಹಾಗೂ ಖಾಸಗಿ ಬಸ್ಸಿಗಾಗಿ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ. ದೂರದ ಊರುಗಳಿಗೆ ಪ್ರಯಾಣಿಸುವವರು ಸರ್ಕಾರಿ ಬಸ್ಸು ಮತ್ತು ಖಾಸಗಿ ವಾಹನಕ್ಕಾಗಿ ಉರಿಬಿಸಿಲು, ಸುರಿವ ಮಳೆಯಲ್ಲಿ ಹೆದ್ದಾರಿಯ ಬದಿಯಲ್ಲಿ ನಿಲ್ಲುತ್ತಿದ್ದಾರೆ. ಇದರಿಂದಾಗಿ ಹೆದ್ದಾರಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಅಧಿಕವಾಗಿದೆ. ತಂಗುದಾಣ ಇಲ್ಲದ ಕಾರಣ ಕೆಲ ಬಸ್ ಗಳು ಎಲ್ಲೆಂದರಲ್ಲಿ ನಿಲ್ಲಿಸುತ್ತವೆ, ಕೆಲವೊಮ್ಮೆ ನಿಲುಗಡೆ ಮಾಡದೆ ಹೊರಟು ಹೋಗುತ್ತವೆ. ಇದೊಂದು ಸಾರ್ವಜನಿಕ ಸಮಸ್ಯೆಯೆಂದು ಪರಿಗಣಿಸಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶೀಘ್ರವಾಗಿ ವ್ಯವಸ್ಥಿತವಾದ ಬಸ್ ತಂಗುದಾಣದ ವ್ಯವಸ್ಥೆಯನ್ನ ಕಲ್ಪಿಸಿಕೊಡಬೇಕಾಗಿ ಆಗ್ರಹಿಸಿದರು.

ಈ ವೇಳೆ ಶಿವಕುಮಾರ್, ಅಮರ್, ಪುನೀತ್, ಸರಸ್ವತಿ, ಮೇಘನಾ, ಅಭಿ, ಮಹೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

2 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

4 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

17 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

18 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

23 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

1 day ago