ತಾಲೂಕಿನ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ತಂಗುದಾಣ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಯುವ ಶಕ್ತಿ ಕರ್ನಾಟಕ ಸದಸ್ಯರು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಬಾಶೆಟ್ಟಿಹಳ್ಳಿ ಮೂಲಕ ಬೆಂಗಳೂರು- ಹಿಂದೂಪುರ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದು, ಬೆಂಗಳೂರು, ಹಿಂದೂಪುರ, ದೊಡ್ಡಬಳ್ಳಾಪುರ ನಗರ, ಗೌರಿಬಿದನೂರು ಸೇರಿದಂತೆ ವಿವಿಧ ಕಡೆ ತೆರಳಲು ಸಾಕಷ್ಟು ಪ್ರಯಾಣಿಕರು ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ಯಾವುದೇ ಸುಸಜ್ಜಿತ ತಂಗುದಾಣ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಆದ್ದರಿಂದ ಪ್ರಯಾಣಿಕರಿಗಾಗಿ ಸೂಕ್ತ ತಂಗುದಾಣದ ವ್ಯವಸ್ಥೆ ಮಾಡಬೇಕೆಂದು ಯುವ ಶಕ್ತಿ ಕರ್ನಾಟಕ ಸದಸ್ಯರು ಒತ್ತಾಯಿಸಿದ್ದಾರೆ.
ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹೆದ್ದಾರಿಯಲ್ಲಿಯೇ ಸರ್ಕಾರಿ ಹಾಗೂ ಖಾಸಗಿ ಬಸ್ಸಿಗಾಗಿ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ. ದೂರದ ಊರುಗಳಿಗೆ ಪ್ರಯಾಣಿಸುವವರು ಸರ್ಕಾರಿ ಬಸ್ಸು ಮತ್ತು ಖಾಸಗಿ ವಾಹನಕ್ಕಾಗಿ ಉರಿಬಿಸಿಲು, ಸುರಿವ ಮಳೆಯಲ್ಲಿ ಹೆದ್ದಾರಿಯ ಬದಿಯಲ್ಲಿ ನಿಲ್ಲುತ್ತಿದ್ದಾರೆ. ಇದರಿಂದಾಗಿ ಹೆದ್ದಾರಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಅಧಿಕವಾಗಿದೆ. ತಂಗುದಾಣ ಇಲ್ಲದ ಕಾರಣ ಕೆಲ ಬಸ್ ಗಳು ಎಲ್ಲೆಂದರಲ್ಲಿ ನಿಲ್ಲಿಸುತ್ತವೆ, ಕೆಲವೊಮ್ಮೆ ನಿಲುಗಡೆ ಮಾಡದೆ ಹೊರಟು ಹೋಗುತ್ತವೆ. ಇದೊಂದು ಸಾರ್ವಜನಿಕ ಸಮಸ್ಯೆಯೆಂದು ಪರಿಗಣಿಸಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶೀಘ್ರವಾಗಿ ವ್ಯವಸ್ಥಿತವಾದ ಬಸ್ ತಂಗುದಾಣದ ವ್ಯವಸ್ಥೆಯನ್ನ ಕಲ್ಪಿಸಿಕೊಡಬೇಕಾಗಿ ಆಗ್ರಹಿಸಿದರು.
ಈ ವೇಳೆ ಶಿವಕುಮಾರ್, ಅಮರ್, ಪುನೀತ್, ಸರಸ್ವತಿ, ಮೇಘನಾ, ಅಭಿ, ಮಹೇಶ್ ಉಪಸ್ಥಿತರಿದ್ದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…