ತಾಲೂಕಿನ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ತಂಗುದಾಣ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಯುವ ಶಕ್ತಿ ಕರ್ನಾಟಕ ಸದಸ್ಯರು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಬಾಶೆಟ್ಟಿಹಳ್ಳಿ ಮೂಲಕ ಬೆಂಗಳೂರು- ಹಿಂದೂಪುರ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದ್ದು, ಬೆಂಗಳೂರು, ಹಿಂದೂಪುರ, ದೊಡ್ಡಬಳ್ಳಾಪುರ ನಗರ, ಗೌರಿಬಿದನೂರು ಸೇರಿದಂತೆ ವಿವಿಧ ಕಡೆ ತೆರಳಲು ಸಾಕಷ್ಟು ಪ್ರಯಾಣಿಕರು ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ಯಾವುದೇ ಸುಸಜ್ಜಿತ ತಂಗುದಾಣ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಆದ್ದರಿಂದ ಪ್ರಯಾಣಿಕರಿಗಾಗಿ ಸೂಕ್ತ ತಂಗುದಾಣದ ವ್ಯವಸ್ಥೆ ಮಾಡಬೇಕೆಂದು ಯುವ ಶಕ್ತಿ ಕರ್ನಾಟಕ ಸದಸ್ಯರು ಒತ್ತಾಯಿಸಿದ್ದಾರೆ.
ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹೆದ್ದಾರಿಯಲ್ಲಿಯೇ ಸರ್ಕಾರಿ ಹಾಗೂ ಖಾಸಗಿ ಬಸ್ಸಿಗಾಗಿ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ. ದೂರದ ಊರುಗಳಿಗೆ ಪ್ರಯಾಣಿಸುವವರು ಸರ್ಕಾರಿ ಬಸ್ಸು ಮತ್ತು ಖಾಸಗಿ ವಾಹನಕ್ಕಾಗಿ ಉರಿಬಿಸಿಲು, ಸುರಿವ ಮಳೆಯಲ್ಲಿ ಹೆದ್ದಾರಿಯ ಬದಿಯಲ್ಲಿ ನಿಲ್ಲುತ್ತಿದ್ದಾರೆ. ಇದರಿಂದಾಗಿ ಹೆದ್ದಾರಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಅಧಿಕವಾಗಿದೆ. ತಂಗುದಾಣ ಇಲ್ಲದ ಕಾರಣ ಕೆಲ ಬಸ್ ಗಳು ಎಲ್ಲೆಂದರಲ್ಲಿ ನಿಲ್ಲಿಸುತ್ತವೆ, ಕೆಲವೊಮ್ಮೆ ನಿಲುಗಡೆ ಮಾಡದೆ ಹೊರಟು ಹೋಗುತ್ತವೆ. ಇದೊಂದು ಸಾರ್ವಜನಿಕ ಸಮಸ್ಯೆಯೆಂದು ಪರಿಗಣಿಸಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶೀಘ್ರವಾಗಿ ವ್ಯವಸ್ಥಿತವಾದ ಬಸ್ ತಂಗುದಾಣದ ವ್ಯವಸ್ಥೆಯನ್ನ ಕಲ್ಪಿಸಿಕೊಡಬೇಕಾಗಿ ಆಗ್ರಹಿಸಿದರು.
ಈ ವೇಳೆ ಶಿವಕುಮಾರ್, ಅಮರ್, ಪುನೀತ್, ಸರಸ್ವತಿ, ಮೇಘನಾ, ಅಭಿ, ಮಹೇಶ್ ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…