ಬಾಶೆಟ್ಟಿಹಳ್ಳಿಯಲ್ಲಿ ಬಸ್ ತಂಗುದಾಣ ನಿರ್ಮಿಸಲು ಮನವಿ

 

ತಾಲೂಕಿನ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ತಂಗುದಾಣ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಯುವ ಶಕ್ತಿ ಕರ್ನಾಟಕ ಸದಸ್ಯರು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಬಾಶೆಟ್ಟಿಹಳ್ಳಿ ಮೂಲಕ ಬೆಂಗಳೂರು- ಹಿಂದೂಪುರ ರಾಷ್ಟ್ರೀಯ ಹೆದ್ದಾರಿ‌ ಹಾದು ಹೋಗಿದ್ದು, ಬೆಂಗಳೂರು, ಹಿಂದೂಪುರ, ದೊಡ್ಡಬಳ್ಳಾಪುರ ನಗರ, ಗೌರಿಬಿದನೂರು ಸೇರಿದಂತೆ ವಿವಿಧ ಕಡೆ ತೆರಳಲು ಸಾಕಷ್ಟು ಪ್ರಯಾಣಿಕರು ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ಯಾವುದೇ ಸುಸಜ್ಜಿತ ತಂಗುದಾಣ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಆದ್ದರಿಂದ ಪ್ರಯಾಣಿಕರಿಗಾಗಿ ಸೂಕ್ತ ತಂಗುದಾಣದ ವ್ಯವಸ್ಥೆ ಮಾಡಬೇಕೆಂದು ಯುವ ಶಕ್ತಿ ಕರ್ನಾಟಕ ಸದಸ್ಯರು ಒತ್ತಾಯಿಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹೆದ್ದಾರಿಯಲ್ಲಿಯೇ ಸರ್ಕಾರಿ ಹಾಗೂ ಖಾಸಗಿ ಬಸ್ಸಿಗಾಗಿ ಕಾಯುವ ದುಸ್ಥಿತಿ ನಿರ್ಮಾಣವಾಗಿದೆ. ದೂರದ ಊರುಗಳಿಗೆ ಪ್ರಯಾಣಿಸುವವರು ಸರ್ಕಾರಿ ಬಸ್ಸು ಮತ್ತು ಖಾಸಗಿ ವಾಹನಕ್ಕಾಗಿ ಉರಿಬಿಸಿಲು, ಸುರಿವ ಮಳೆಯಲ್ಲಿ ಹೆದ್ದಾರಿಯ ಬದಿಯಲ್ಲಿ ನಿಲ್ಲುತ್ತಿದ್ದಾರೆ. ಇದರಿಂದಾಗಿ ಹೆದ್ದಾರಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಅಧಿಕವಾಗಿದೆ. ತಂಗುದಾಣ ಇಲ್ಲದ ಕಾರಣ ಕೆಲ ಬಸ್ ಗಳು ಎಲ್ಲೆಂದರಲ್ಲಿ ನಿಲ್ಲಿಸುತ್ತವೆ, ಕೆಲವೊಮ್ಮೆ ನಿಲುಗಡೆ ಮಾಡದೆ ಹೊರಟು ಹೋಗುತ್ತವೆ. ಇದೊಂದು ಸಾರ್ವಜನಿಕ ಸಮಸ್ಯೆಯೆಂದು ಪರಿಗಣಿಸಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶೀಘ್ರವಾಗಿ ವ್ಯವಸ್ಥಿತವಾದ ಬಸ್ ತಂಗುದಾಣದ ವ್ಯವಸ್ಥೆಯನ್ನ ಕಲ್ಪಿಸಿಕೊಡಬೇಕಾಗಿ ಆಗ್ರಹಿಸಿದರು.

ಈ ವೇಳೆ ಶಿವಕುಮಾರ್, ಅಮರ್, ಪುನೀತ್, ಸರಸ್ವತಿ, ಮೇಘನಾ, ಅಭಿ, ಮಹೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago