ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ ಒಂದು ವಾರದಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದರೂ, ಈವರೆಗೆ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಹಗರಣದಲ್ಲಿ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಸ್ಥಳೀಯ ಮುಖಂಡ ಹಾಗೂ ಟಿಎಪಿಎಂಸಿಎಸ್ ನಿರ್ದೇಶಕ ಅಂಬರೀಶ್ ಆಗ್ರಹಿಸಿದರು.

ಗುರುವಾರ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನಡೆದಿದ್ದರೂ, ಅನೇಕ ಕಾಮಗಾರಿಗಳು ನೆಲಮಟ್ಟದಲ್ಲಿ ನಡೆದಿಲ್ಲ. ಆದರೆ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಗುತ್ತಿಗೆದಾರರಿಗೆ ಕೋಟ್ಯಂತರ ರೂಪಾಯಿ ಪಾವತಿಸಲಾಗಿದೆ ಎಂದು ಆರೋಪಿಸಿದರು.

ಮೂರು ವರ್ಷಗಳಿಂದ ಪಟ್ಟಣ ಪಂಚಾಯಿತಿಗೆ ಚುನಾಯಿತ ಆಡಳಿತ ಮಂಡಳಿ ಇಲ್ಲದೆ ತಹಶೀಲ್ದಾರ್ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಅವಧಿಯಲ್ಲಿ ಅಧಿಕಾರಿಗಳೇ ಸಂಪೂರ್ಣ ಆಡಳಿತ ನಡೆಸಿದ್ದು, ಶಾಸಕರ ಸೂಚನೆಯಂತೆ ಆಡಳಿತ ನಡೆದಿರುವ ಕಾರಣ ಹಗರಣದಲ್ಲಿ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಮಾಹಿತಿ ಹಕ್ಕು ಕಾಯ್ದೆಯಡಿ ಸಂಗ್ರಹಿಸಿದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರಿಗೆ ಸಲ್ಲಿಸಲಾಗಿದೆ. ದಾಖಲೆಗಳಲ್ಲಿ ಕಾಮಗಾರಿಗಳು ನಡೆದಿರುವಂತೆ ಬಿಲ್ ಮಾಡಲಾಗಿದ್ದರೂ, ವಾಸ್ತವದಲ್ಲಿ ಅನೇಕ ಕಾಮಗಾರಿಗಳು ನಡೆದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಹಣ ಸಿಗುತ್ತಿಲ್ಲ ಎಂದು ಶಾಸಕರು ಹೇಳುತ್ತಿರುತ್ತಾರೆ. ಆದರೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ವಾರ್ಷಿಕ ₹5 ಕೋಟಿಗೂ ಅಧಿಕ ತೆರಿಗೆ ಸಂಗ್ರಹವಾಗುತ್ತಿದ್ದು, ಅದೇ ಹಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಿತ್ತು. ಆದರೆ ಆ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.

ಮೂರು ವರ್ಷಗಳಿಂದ ಮುಖ್ಯಾಧಿಕಾರಿಯಾಗಿದ್ದ ನರಸಿಂಹಮೂರ್ತಿ ಹಗರಣದ ವಿಚಾರ ಬಹಿರಂಗವಾಗುತ್ತಿದ್ದಂತೆ ದಿಢೀರ್ ವರ್ಗಾವಣೆ ಮಾಡಿಸಿಕೊಂಡು ತೆರಳಿದ್ದಾರೆ. ಅವರ ಅವಧಿಯಲ್ಲಿ ನಡೆದ ಬಹುತೇಕ ಕಾಮಗಾರಿಗಳ ಬಿಲ್‌ಗಳು ನಕಲಿಯಾಗಿವೆ ಎಂದು ಆರೋಪಿಸಿ, ಅವರ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದರು.

ಲೋಕಾಯುಕ್ತ ಅಧಿಕಾರಿಗಳು ಕಳೆದ ಹತ್ತು ದಿನಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ನಕಲಿ ಬಿಲ್‌ಗಳ ಪ್ರಮಾಣ ಕಂಡು ಅಧಿಕಾರಿಗಳೇ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸ್ಥಳೀಯ ಮುಖಂಡರಾದ ನಾರಾಯಣಸ್ವಾಮಿ, ರವಿಕುಮಾರ್, ವಿಶ್ವನಾಥ್, ಸೋನು, ಸಿದ್ದರಾಜ್, ಮಹೇಶ್, ಪವನ್ ಕುಮಾರ್, ನಾಗೇಶ್ ಹಾಗೂ ಮಿಥುನ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago