ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ; ಆತಂಕದಲ್ಲಿ ಸಾರ್ವಜನಿಕರು

ಗ್ರಾಮ ಪಂಚಾಯತಿಯಾಗಿದ್ದ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಜನಸಂಖ್ಯೆ ಹಾಗೂ ಸರಕಾರದ ವಿವಿಧ ಮಾನದಂಡಗಳಡಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿತು. ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಬಡ್ತಿ ಪಡೆದ ಬಾಶೆಟ್ಟಿಹಳ್ಳಿಯ ಅಭಿವೃದ್ಧಿಯು ಮತ್ತಷ್ಟು ವೇಗದ ಪಡೆದುಕೊಳ್ಳುವ ನಿರೀಕ್ಷೆಯಲ್ಲಿ ಜನತೆಗೆ ತೀವ್ರ ನಿರಾಸೆಯಾಗಿದೆ. ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಮರಿಚಿಕೆಯಾಗಿದೆ. ಮೂಲಭೂತ ಸೌಕರ್ಯಗಳ ಅನುಷ್ಠಾನದಲ್ಲೂ ಹಿಂದೆ ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಸ ವಿಲೇವಾರಿಯಲ್ಲಿ ಪ.ಪಂ ವಿಫಲ:

ಕಸ ವಿಲೇವಾರಿ ಮತ್ತು ಸ್ವಚ್ಚತಾ ವಿಷಯಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಎರಡು ಬಾರಿ, ಕೇಂದ್ರ ಸರಕಾರದಿಂದ ಕೊಡಮಾಡಲಾಗುವ
ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತಿಕರಣ್, ನೈರ್ಮಲ್ಯ ರತ್ನ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದ್ದ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯೂ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಕಾರ್ಯವೈಖರಿಯಲ್ಲಿ ಸಂಪೂರ್ಣ ನೆಲಕಚ್ಚಿದೆ. ಮನೆ ಮನೆಯಲ್ಲಿ ಕಸ ವಿಂಗಡಣೆಯ ಕೆಲಸ ನಿಂತಿದೆ. ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಸ್ವಚ್ಚತಾ ವಾಹನಗಳು ತೆರಳುವುದೇ ಕಷ್ಟಕರವಾಗಿದೆ. ಇದರಿಂದಾಗಿ ಕಸದ ಸಮಸ್ಯೆ ಉಲ್ಬಣವಾಗಿದೆ.

ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ:

ವೈಜ್ಞಾನಿಕವಾಗಿ ಕಸ ಸಂಗ್ರಹ ಮಾಡದ ಪಟ್ಟಣ ಪಂಚಾಯತಿಯ ವೈಫಲ್ಯದಿಂದಾಗಿ ವರದನಹಳ್ಳಿ ಬಳಿ ಅನಧಿಕೃತವಾಗಿ ಮಿನಿ ಎಂಎಸ್ಜಿಪಿ ಘಟಕ ಸೃಷ್ಟಿಯಾಗಿದೆ. ಹಸಿ ಕಸ, ಒಣಕಸ, ಪ್ಲಾಸ್ಟಿಕ್, ಘನತ್ಯಾಜ್ಯ ಹೀಗೆ ಯಾವುದೇ ರೀತಿಯಲ್ಲಿ ವಿಂಗಡಣೆ ಮಾಡದೆ ಕಸ ಸಂಗ್ರಹ ಮಾಡಿ ವರದನಹಳ್ಳಿ ಬಳಿಯ ಕಲ್ಲು ಬಂಡೆ ಹಳ್ಳದ ಬಳಿ ಸುರಿದು ರಾಶಿ ರಾಶಿ ಕಸಕ್ಕೆ ಬೆಂಕಿ ಇಡಲಾಗ್ತಿದೆ.

ವಿಷ ಗಾಳಿ, ವಿಷ ನೀರು:

ಅವೈಜ್ಞಾನಿಕವಾಗಿ ಸುರಿದಿರುವ ರಾಶಿ ರಾಶಿ ಕಸಕ್ಕೆ ಪ್ರತಿನಿತ್ಯ ಬೆಂಕಿ ಇಡಲಾಗುತ್ತಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿನ ವಿಷಯುಕ್ತ ಗಾಳಿ ಸೇವಿಸುವಂತಾಗಿದೆ. ದನಕರು ಹಾಗೂ ಕುರಿ ಮೇಕೆಗಳಿಗೆ ವಿಷಯುಕ್ತ ನೀರನ್ನು ಕುಡಿಯಬೇಕಾಗಿದೆ.

ಮ್ಯೂಸಿಯಂ ಆದ ತ್ಯಾಜ್ಯ ವಿಲೇವಾರಿ ಘಟಕ.

2019 ನೇ ಸಾಲಿನಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಂತ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕವನ್ನು ಸ್ಥಾಪನೆ ಮಾಡಲಾಯಿತು. ಈ ಘಟಕಕ್ಕೆ ಅಕ್ಕಪಕ್ಕದ ರಾಜ್ಯಗಳಿಂದ, ವಿವಿಧ ಜಿಲ್ಲೆಗಳಿಂದ ಹಾಗೂ ದೇಶ, ವಿದೇಶಗಳಿಂದ ಜನಪ್ರತಿನಿಧಿಗಳ ತಂಡ ಆಗಮಿಸಿ ಇಲ್ಲಿನ ಕಸ ಘಟಕ, ವಿಲೇವಾರಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಆದರೀಗ ತ್ಯಾಜ್ಯ ವಿಲೇವಾರಿ ಘಟಕ ಬಹುತೇಕ ನಿಷ್ಕ್ರಿಯವಾಗಿದ್ದು, ಕೇವಲ ಮ್ಯೂಸಿಯಂನಂತೆ ನೋಡಲಷ್ಟೆ ಚೆಂದವಾಗಿದೆ.

ಕಸದ ಅವ್ಯವಸ್ಥೆ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ನೇಮಕವಾಗಬೇಕು. ಆದರೆ ಈ ಪ.ಪಂಚಾಯತಿಗೆ ಕಂದಾಯ ನಿರೀಕ್ಷಕ ಅಧಿಕಾರಿ ಬಡ್ತಿ ಆಧಾರದ ಮೇಲೆ ಈ ಕುರ್ಚಿಯಲ್ಲಿ ಕುಳಿತಿದ್ದಾರೆ. ಅಭಿವೃದ್ಧಿ ಮಾಡುವ ಬಗ್ಗೆ ಯಾವುದೇ ಮಾಹಿತಿಯೇ ಇಲ್ಲ. ತಮಗಿಷ್ಟ ಬಂದಂತೆ ತೆರಿಗೆ ವಸೂಲಿ ಮಾಡಿಕೊಂಡು ಅಂಧಾ ದರ್ಬಾರ್ ನಡೆಸುತ್ತಿದ್ದಾರೆ. ಇಂತ ಅಧಿಕಾರಿಯನ್ನು ವರ್ಗಾವಣೆ ಮಾಡಿ ಅರ್ಹ ಕೆಎಎಸ್ ಅಧಿಕಾರಿಯನ್ನು ನೇಮಿಸಿ ಅಭಿವೃದ್ಧಿಗೆ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಪಂಚಾಯತಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಮಾಡಲಾಗುವುದು ಎಂದು ಮಾಜಿ ಸದಸ್ಯ ಅಂಬರೀಶ್ ತಿಳಿಸಿದರು.

ಟ್ರ್ಯಾಕ್ಟರ್ ಹಾಗೂ ಸ್ವಚ್ಚತಾ ವಾಹನಗಳ ಸಂಖ್ಯೆ ಕಡಿಮೆ ಇದೆ. ಸಿಬ್ಬಂದಿಯ ಸಂಖ್ಯೆಯೂ ಕಡಿಮೆ ಇದೆ. ಘನತ್ಯಾಜ್ಯ ಘಟಕ ಸೂಕ್ತವಾಗಿ ಕೆಲಸ ಮಾಡುತ್ತಿದೆ. ಮುಂದೆ ಮತ್ತಷ್ಟು ಸುಸಜ್ಜಿತವಾಗಿ ನಡೆಸಲಾಗುವುದು ಎಂದು ಬಾಶೆಟ್ಟಿಹಳ್ಳಿ ಪ.ಪಂ ಮುಖ್ಯಾಧಿಕಾರಿ ಮುನಿರಾಜು ಎಂದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

7 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

8 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

14 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

15 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

20 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago