ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ; ಆತಂಕದಲ್ಲಿ ಸಾರ್ವಜನಿಕರು

ಗ್ರಾಮ ಪಂಚಾಯತಿಯಾಗಿದ್ದ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಜನಸಂಖ್ಯೆ ಹಾಗೂ ಸರಕಾರದ ವಿವಿಧ ಮಾನದಂಡಗಳಡಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿತು. ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಬಡ್ತಿ ಪಡೆದ ಬಾಶೆಟ್ಟಿಹಳ್ಳಿಯ ಅಭಿವೃದ್ಧಿಯು ಮತ್ತಷ್ಟು ವೇಗದ ಪಡೆದುಕೊಳ್ಳುವ ನಿರೀಕ್ಷೆಯಲ್ಲಿ ಜನತೆಗೆ ತೀವ್ರ ನಿರಾಸೆಯಾಗಿದೆ. ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಮರಿಚಿಕೆಯಾಗಿದೆ. ಮೂಲಭೂತ ಸೌಕರ್ಯಗಳ ಅನುಷ್ಠಾನದಲ್ಲೂ ಹಿಂದೆ ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಸ ವಿಲೇವಾರಿಯಲ್ಲಿ ಪ.ಪಂ ವಿಫಲ:

ಕಸ ವಿಲೇವಾರಿ ಮತ್ತು ಸ್ವಚ್ಚತಾ ವಿಷಯಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಎರಡು ಬಾರಿ, ಕೇಂದ್ರ ಸರಕಾರದಿಂದ ಕೊಡಮಾಡಲಾಗುವ
ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತಿಕರಣ್, ನೈರ್ಮಲ್ಯ ರತ್ನ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದ್ದ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯೂ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಕಾರ್ಯವೈಖರಿಯಲ್ಲಿ ಸಂಪೂರ್ಣ ನೆಲಕಚ್ಚಿದೆ. ಮನೆ ಮನೆಯಲ್ಲಿ ಕಸ ವಿಂಗಡಣೆಯ ಕೆಲಸ ನಿಂತಿದೆ. ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಸ್ವಚ್ಚತಾ ವಾಹನಗಳು ತೆರಳುವುದೇ ಕಷ್ಟಕರವಾಗಿದೆ. ಇದರಿಂದಾಗಿ ಕಸದ ಸಮಸ್ಯೆ ಉಲ್ಬಣವಾಗಿದೆ.

ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ:

ವೈಜ್ಞಾನಿಕವಾಗಿ ಕಸ ಸಂಗ್ರಹ ಮಾಡದ ಪಟ್ಟಣ ಪಂಚಾಯತಿಯ ವೈಫಲ್ಯದಿಂದಾಗಿ ವರದನಹಳ್ಳಿ ಬಳಿ ಅನಧಿಕೃತವಾಗಿ ಮಿನಿ ಎಂಎಸ್ಜಿಪಿ ಘಟಕ ಸೃಷ್ಟಿಯಾಗಿದೆ. ಹಸಿ ಕಸ, ಒಣಕಸ, ಪ್ಲಾಸ್ಟಿಕ್, ಘನತ್ಯಾಜ್ಯ ಹೀಗೆ ಯಾವುದೇ ರೀತಿಯಲ್ಲಿ ವಿಂಗಡಣೆ ಮಾಡದೆ ಕಸ ಸಂಗ್ರಹ ಮಾಡಿ ವರದನಹಳ್ಳಿ ಬಳಿಯ ಕಲ್ಲು ಬಂಡೆ ಹಳ್ಳದ ಬಳಿ ಸುರಿದು ರಾಶಿ ರಾಶಿ ಕಸಕ್ಕೆ ಬೆಂಕಿ ಇಡಲಾಗ್ತಿದೆ.

ವಿಷ ಗಾಳಿ, ವಿಷ ನೀರು:

ಅವೈಜ್ಞಾನಿಕವಾಗಿ ಸುರಿದಿರುವ ರಾಶಿ ರಾಶಿ ಕಸಕ್ಕೆ ಪ್ರತಿನಿತ್ಯ ಬೆಂಕಿ ಇಡಲಾಗುತ್ತಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿನ ವಿಷಯುಕ್ತ ಗಾಳಿ ಸೇವಿಸುವಂತಾಗಿದೆ. ದನಕರು ಹಾಗೂ ಕುರಿ ಮೇಕೆಗಳಿಗೆ ವಿಷಯುಕ್ತ ನೀರನ್ನು ಕುಡಿಯಬೇಕಾಗಿದೆ.

ಮ್ಯೂಸಿಯಂ ಆದ ತ್ಯಾಜ್ಯ ವಿಲೇವಾರಿ ಘಟಕ.

2019 ನೇ ಸಾಲಿನಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಂತ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕವನ್ನು ಸ್ಥಾಪನೆ ಮಾಡಲಾಯಿತು. ಈ ಘಟಕಕ್ಕೆ ಅಕ್ಕಪಕ್ಕದ ರಾಜ್ಯಗಳಿಂದ, ವಿವಿಧ ಜಿಲ್ಲೆಗಳಿಂದ ಹಾಗೂ ದೇಶ, ವಿದೇಶಗಳಿಂದ ಜನಪ್ರತಿನಿಧಿಗಳ ತಂಡ ಆಗಮಿಸಿ ಇಲ್ಲಿನ ಕಸ ಘಟಕ, ವಿಲೇವಾರಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಆದರೀಗ ತ್ಯಾಜ್ಯ ವಿಲೇವಾರಿ ಘಟಕ ಬಹುತೇಕ ನಿಷ್ಕ್ರಿಯವಾಗಿದ್ದು, ಕೇವಲ ಮ್ಯೂಸಿಯಂನಂತೆ ನೋಡಲಷ್ಟೆ ಚೆಂದವಾಗಿದೆ.

ಕಸದ ಅವ್ಯವಸ್ಥೆ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ನೇಮಕವಾಗಬೇಕು. ಆದರೆ ಈ ಪ.ಪಂಚಾಯತಿಗೆ ಕಂದಾಯ ನಿರೀಕ್ಷಕ ಅಧಿಕಾರಿ ಬಡ್ತಿ ಆಧಾರದ ಮೇಲೆ ಈ ಕುರ್ಚಿಯಲ್ಲಿ ಕುಳಿತಿದ್ದಾರೆ. ಅಭಿವೃದ್ಧಿ ಮಾಡುವ ಬಗ್ಗೆ ಯಾವುದೇ ಮಾಹಿತಿಯೇ ಇಲ್ಲ. ತಮಗಿಷ್ಟ ಬಂದಂತೆ ತೆರಿಗೆ ವಸೂಲಿ ಮಾಡಿಕೊಂಡು ಅಂಧಾ ದರ್ಬಾರ್ ನಡೆಸುತ್ತಿದ್ದಾರೆ. ಇಂತ ಅಧಿಕಾರಿಯನ್ನು ವರ್ಗಾವಣೆ ಮಾಡಿ ಅರ್ಹ ಕೆಎಎಸ್ ಅಧಿಕಾರಿಯನ್ನು ನೇಮಿಸಿ ಅಭಿವೃದ್ಧಿಗೆ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಪಂಚಾಯತಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಮಾಡಲಾಗುವುದು ಎಂದು ಮಾಜಿ ಸದಸ್ಯ ಅಂಬರೀಶ್ ತಿಳಿಸಿದರು.

ಟ್ರ್ಯಾಕ್ಟರ್ ಹಾಗೂ ಸ್ವಚ್ಚತಾ ವಾಹನಗಳ ಸಂಖ್ಯೆ ಕಡಿಮೆ ಇದೆ. ಸಿಬ್ಬಂದಿಯ ಸಂಖ್ಯೆಯೂ ಕಡಿಮೆ ಇದೆ. ಘನತ್ಯಾಜ್ಯ ಘಟಕ ಸೂಕ್ತವಾಗಿ ಕೆಲಸ ಮಾಡುತ್ತಿದೆ. ಮುಂದೆ ಮತ್ತಷ್ಟು ಸುಸಜ್ಜಿತವಾಗಿ ನಡೆಸಲಾಗುವುದು ಎಂದು ಬಾಶೆಟ್ಟಿಹಳ್ಳಿ ಪ.ಪಂ ಮುಖ್ಯಾಧಿಕಾರಿ ಮುನಿರಾಜು ಎಂದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago