ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ; ಆತಂಕದಲ್ಲಿ ಸಾರ್ವಜನಿಕರು

ಗ್ರಾಮ ಪಂಚಾಯತಿಯಾಗಿದ್ದ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಜನಸಂಖ್ಯೆ ಹಾಗೂ ಸರಕಾರದ ವಿವಿಧ ಮಾನದಂಡಗಳಡಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿತು. ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಬಡ್ತಿ ಪಡೆದ ಬಾಶೆಟ್ಟಿಹಳ್ಳಿಯ ಅಭಿವೃದ್ಧಿಯು ಮತ್ತಷ್ಟು ವೇಗದ ಪಡೆದುಕೊಳ್ಳುವ ನಿರೀಕ್ಷೆಯಲ್ಲಿ ಜನತೆಗೆ ತೀವ್ರ ನಿರಾಸೆಯಾಗಿದೆ. ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಮರಿಚಿಕೆಯಾಗಿದೆ. ಮೂಲಭೂತ ಸೌಕರ್ಯಗಳ ಅನುಷ್ಠಾನದಲ್ಲೂ ಹಿಂದೆ ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಸ ವಿಲೇವಾರಿಯಲ್ಲಿ ಪ.ಪಂ ವಿಫಲ:

ಕಸ ವಿಲೇವಾರಿ ಮತ್ತು ಸ್ವಚ್ಚತಾ ವಿಷಯಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಎರಡು ಬಾರಿ, ಕೇಂದ್ರ ಸರಕಾರದಿಂದ ಕೊಡಮಾಡಲಾಗುವ
ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತಿಕರಣ್, ನೈರ್ಮಲ್ಯ ರತ್ನ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದ್ದ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯೂ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಕಾರ್ಯವೈಖರಿಯಲ್ಲಿ ಸಂಪೂರ್ಣ ನೆಲಕಚ್ಚಿದೆ. ಮನೆ ಮನೆಯಲ್ಲಿ ಕಸ ವಿಂಗಡಣೆಯ ಕೆಲಸ ನಿಂತಿದೆ. ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಸ್ವಚ್ಚತಾ ವಾಹನಗಳು ತೆರಳುವುದೇ ಕಷ್ಟಕರವಾಗಿದೆ. ಇದರಿಂದಾಗಿ ಕಸದ ಸಮಸ್ಯೆ ಉಲ್ಬಣವಾಗಿದೆ.

ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ:

ವೈಜ್ಞಾನಿಕವಾಗಿ ಕಸ ಸಂಗ್ರಹ ಮಾಡದ ಪಟ್ಟಣ ಪಂಚಾಯತಿಯ ವೈಫಲ್ಯದಿಂದಾಗಿ ವರದನಹಳ್ಳಿ ಬಳಿ ಅನಧಿಕೃತವಾಗಿ ಮಿನಿ ಎಂಎಸ್ಜಿಪಿ ಘಟಕ ಸೃಷ್ಟಿಯಾಗಿದೆ. ಹಸಿ ಕಸ, ಒಣಕಸ, ಪ್ಲಾಸ್ಟಿಕ್, ಘನತ್ಯಾಜ್ಯ ಹೀಗೆ ಯಾವುದೇ ರೀತಿಯಲ್ಲಿ ವಿಂಗಡಣೆ ಮಾಡದೆ ಕಸ ಸಂಗ್ರಹ ಮಾಡಿ ವರದನಹಳ್ಳಿ ಬಳಿಯ ಕಲ್ಲು ಬಂಡೆ ಹಳ್ಳದ ಬಳಿ ಸುರಿದು ರಾಶಿ ರಾಶಿ ಕಸಕ್ಕೆ ಬೆಂಕಿ ಇಡಲಾಗ್ತಿದೆ.

ವಿಷ ಗಾಳಿ, ವಿಷ ನೀರು:

ಅವೈಜ್ಞಾನಿಕವಾಗಿ ಸುರಿದಿರುವ ರಾಶಿ ರಾಶಿ ಕಸಕ್ಕೆ ಪ್ರತಿನಿತ್ಯ ಬೆಂಕಿ ಇಡಲಾಗುತ್ತಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿನ ವಿಷಯುಕ್ತ ಗಾಳಿ ಸೇವಿಸುವಂತಾಗಿದೆ. ದನಕರು ಹಾಗೂ ಕುರಿ ಮೇಕೆಗಳಿಗೆ ವಿಷಯುಕ್ತ ನೀರನ್ನು ಕುಡಿಯಬೇಕಾಗಿದೆ.

ಮ್ಯೂಸಿಯಂ ಆದ ತ್ಯಾಜ್ಯ ವಿಲೇವಾರಿ ಘಟಕ.

2019 ನೇ ಸಾಲಿನಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಂತ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕವನ್ನು ಸ್ಥಾಪನೆ ಮಾಡಲಾಯಿತು. ಈ ಘಟಕಕ್ಕೆ ಅಕ್ಕಪಕ್ಕದ ರಾಜ್ಯಗಳಿಂದ, ವಿವಿಧ ಜಿಲ್ಲೆಗಳಿಂದ ಹಾಗೂ ದೇಶ, ವಿದೇಶಗಳಿಂದ ಜನಪ್ರತಿನಿಧಿಗಳ ತಂಡ ಆಗಮಿಸಿ ಇಲ್ಲಿನ ಕಸ ಘಟಕ, ವಿಲೇವಾರಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಆದರೀಗ ತ್ಯಾಜ್ಯ ವಿಲೇವಾರಿ ಘಟಕ ಬಹುತೇಕ ನಿಷ್ಕ್ರಿಯವಾಗಿದ್ದು, ಕೇವಲ ಮ್ಯೂಸಿಯಂನಂತೆ ನೋಡಲಷ್ಟೆ ಚೆಂದವಾಗಿದೆ.

ಕಸದ ಅವ್ಯವಸ್ಥೆ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ನೇಮಕವಾಗಬೇಕು. ಆದರೆ ಈ ಪ.ಪಂಚಾಯತಿಗೆ ಕಂದಾಯ ನಿರೀಕ್ಷಕ ಅಧಿಕಾರಿ ಬಡ್ತಿ ಆಧಾರದ ಮೇಲೆ ಈ ಕುರ್ಚಿಯಲ್ಲಿ ಕುಳಿತಿದ್ದಾರೆ. ಅಭಿವೃದ್ಧಿ ಮಾಡುವ ಬಗ್ಗೆ ಯಾವುದೇ ಮಾಹಿತಿಯೇ ಇಲ್ಲ. ತಮಗಿಷ್ಟ ಬಂದಂತೆ ತೆರಿಗೆ ವಸೂಲಿ ಮಾಡಿಕೊಂಡು ಅಂಧಾ ದರ್ಬಾರ್ ನಡೆಸುತ್ತಿದ್ದಾರೆ. ಇಂತ ಅಧಿಕಾರಿಯನ್ನು ವರ್ಗಾವಣೆ ಮಾಡಿ ಅರ್ಹ ಕೆಎಎಸ್ ಅಧಿಕಾರಿಯನ್ನು ನೇಮಿಸಿ ಅಭಿವೃದ್ಧಿಗೆ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಪಂಚಾಯತಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಮಾಡಲಾಗುವುದು ಎಂದು ಮಾಜಿ ಸದಸ್ಯ ಅಂಬರೀಶ್ ತಿಳಿಸಿದರು.

ಟ್ರ್ಯಾಕ್ಟರ್ ಹಾಗೂ ಸ್ವಚ್ಚತಾ ವಾಹನಗಳ ಸಂಖ್ಯೆ ಕಡಿಮೆ ಇದೆ. ಸಿಬ್ಬಂದಿಯ ಸಂಖ್ಯೆಯೂ ಕಡಿಮೆ ಇದೆ. ಘನತ್ಯಾಜ್ಯ ಘಟಕ ಸೂಕ್ತವಾಗಿ ಕೆಲಸ ಮಾಡುತ್ತಿದೆ. ಮುಂದೆ ಮತ್ತಷ್ಟು ಸುಸಜ್ಜಿತವಾಗಿ ನಡೆಸಲಾಗುವುದು ಎಂದು ಬಾಶೆಟ್ಟಿಹಳ್ಳಿ ಪ.ಪಂ ಮುಖ್ಯಾಧಿಕಾರಿ ಮುನಿರಾಜು ಎಂದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

8 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

8 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

9 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

14 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

20 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago