ಗ್ರಾಮ ಪಂಚಾಯತಿಯಾಗಿದ್ದ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಜನಸಂಖ್ಯೆ ಹಾಗೂ ಸರಕಾರದ ವಿವಿಧ ಮಾನದಂಡಗಳಡಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿತು. ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಬಡ್ತಿ ಪಡೆದ ಬಾಶೆಟ್ಟಿಹಳ್ಳಿಯ ಅಭಿವೃದ್ಧಿಯು ಮತ್ತಷ್ಟು ವೇಗದ ಪಡೆದುಕೊಳ್ಳುವ ನಿರೀಕ್ಷೆಯಲ್ಲಿ ಜನತೆಗೆ ತೀವ್ರ ನಿರಾಸೆಯಾಗಿದೆ. ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಮರಿಚಿಕೆಯಾಗಿದೆ. ಮೂಲಭೂತ ಸೌಕರ್ಯಗಳ ಅನುಷ್ಠಾನದಲ್ಲೂ ಹಿಂದೆ ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಸ ವಿಲೇವಾರಿ ಮತ್ತು ಸ್ವಚ್ಚತಾ ವಿಷಯಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಎರಡು ಬಾರಿ, ಕೇಂದ್ರ ಸರಕಾರದಿಂದ ಕೊಡಮಾಡಲಾಗುವ
ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತಿಕರಣ್, ನೈರ್ಮಲ್ಯ ರತ್ನ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದ್ದ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯೂ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಕಾರ್ಯವೈಖರಿಯಲ್ಲಿ ಸಂಪೂರ್ಣ ನೆಲಕಚ್ಚಿದೆ. ಮನೆ ಮನೆಯಲ್ಲಿ ಕಸ ವಿಂಗಡಣೆಯ ಕೆಲಸ ನಿಂತಿದೆ. ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಸ್ವಚ್ಚತಾ ವಾಹನಗಳು ತೆರಳುವುದೇ ಕಷ್ಟಕರವಾಗಿದೆ. ಇದರಿಂದಾಗಿ ಕಸದ ಸಮಸ್ಯೆ ಉಲ್ಬಣವಾಗಿದೆ.
ವೈಜ್ಞಾನಿಕವಾಗಿ ಕಸ ಸಂಗ್ರಹ ಮಾಡದ ಪಟ್ಟಣ ಪಂಚಾಯತಿಯ ವೈಫಲ್ಯದಿಂದಾಗಿ ವರದನಹಳ್ಳಿ ಬಳಿ ಅನಧಿಕೃತವಾಗಿ ಮಿನಿ ಎಂಎಸ್ಜಿಪಿ ಘಟಕ ಸೃಷ್ಟಿಯಾಗಿದೆ. ಹಸಿ ಕಸ, ಒಣಕಸ, ಪ್ಲಾಸ್ಟಿಕ್, ಘನತ್ಯಾಜ್ಯ ಹೀಗೆ ಯಾವುದೇ ರೀತಿಯಲ್ಲಿ ವಿಂಗಡಣೆ ಮಾಡದೆ ಕಸ ಸಂಗ್ರಹ ಮಾಡಿ ವರದನಹಳ್ಳಿ ಬಳಿಯ ಕಲ್ಲು ಬಂಡೆ ಹಳ್ಳದ ಬಳಿ ಸುರಿದು ರಾಶಿ ರಾಶಿ ಕಸಕ್ಕೆ ಬೆಂಕಿ ಇಡಲಾಗ್ತಿದೆ.
ಅವೈಜ್ಞಾನಿಕವಾಗಿ ಸುರಿದಿರುವ ರಾಶಿ ರಾಶಿ ಕಸಕ್ಕೆ ಪ್ರತಿನಿತ್ಯ ಬೆಂಕಿ ಇಡಲಾಗುತ್ತಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿನ ವಿಷಯುಕ್ತ ಗಾಳಿ ಸೇವಿಸುವಂತಾಗಿದೆ. ದನಕರು ಹಾಗೂ ಕುರಿ ಮೇಕೆಗಳಿಗೆ ವಿಷಯುಕ್ತ ನೀರನ್ನು ಕುಡಿಯಬೇಕಾಗಿದೆ.
2019 ನೇ ಸಾಲಿನಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಂತ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕವನ್ನು ಸ್ಥಾಪನೆ ಮಾಡಲಾಯಿತು. ಈ ಘಟಕಕ್ಕೆ ಅಕ್ಕಪಕ್ಕದ ರಾಜ್ಯಗಳಿಂದ, ವಿವಿಧ ಜಿಲ್ಲೆಗಳಿಂದ ಹಾಗೂ ದೇಶ, ವಿದೇಶಗಳಿಂದ ಜನಪ್ರತಿನಿಧಿಗಳ ತಂಡ ಆಗಮಿಸಿ ಇಲ್ಲಿನ ಕಸ ಘಟಕ, ವಿಲೇವಾರಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಆದರೀಗ ತ್ಯಾಜ್ಯ ವಿಲೇವಾರಿ ಘಟಕ ಬಹುತೇಕ ನಿಷ್ಕ್ರಿಯವಾಗಿದ್ದು, ಕೇವಲ ಮ್ಯೂಸಿಯಂನಂತೆ ನೋಡಲಷ್ಟೆ ಚೆಂದವಾಗಿದೆ.
ಕಸದ ಅವ್ಯವಸ್ಥೆ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ನೇಮಕವಾಗಬೇಕು. ಆದರೆ ಈ ಪ.ಪಂಚಾಯತಿಗೆ ಕಂದಾಯ ನಿರೀಕ್ಷಕ ಅಧಿಕಾರಿ ಬಡ್ತಿ ಆಧಾರದ ಮೇಲೆ ಈ ಕುರ್ಚಿಯಲ್ಲಿ ಕುಳಿತಿದ್ದಾರೆ. ಅಭಿವೃದ್ಧಿ ಮಾಡುವ ಬಗ್ಗೆ ಯಾವುದೇ ಮಾಹಿತಿಯೇ ಇಲ್ಲ. ತಮಗಿಷ್ಟ ಬಂದಂತೆ ತೆರಿಗೆ ವಸೂಲಿ ಮಾಡಿಕೊಂಡು ಅಂಧಾ ದರ್ಬಾರ್ ನಡೆಸುತ್ತಿದ್ದಾರೆ. ಇಂತ ಅಧಿಕಾರಿಯನ್ನು ವರ್ಗಾವಣೆ ಮಾಡಿ ಅರ್ಹ ಕೆಎಎಸ್ ಅಧಿಕಾರಿಯನ್ನು ನೇಮಿಸಿ ಅಭಿವೃದ್ಧಿಗೆ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಪಂಚಾಯತಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಮಾಡಲಾಗುವುದು ಎಂದು ಮಾಜಿ ಸದಸ್ಯ ಅಂಬರೀಶ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…