ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ; ಆತಂಕದಲ್ಲಿ ಸಾರ್ವಜನಿಕರು

ಗ್ರಾಮ ಪಂಚಾಯತಿಯಾಗಿದ್ದ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಜನಸಂಖ್ಯೆ ಹಾಗೂ ಸರಕಾರದ ವಿವಿಧ ಮಾನದಂಡಗಳಡಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿತು. ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಬಡ್ತಿ ಪಡೆದ ಬಾಶೆಟ್ಟಿಹಳ್ಳಿಯ ಅಭಿವೃದ್ಧಿಯು ಮತ್ತಷ್ಟು ವೇಗದ ಪಡೆದುಕೊಳ್ಳುವ ನಿರೀಕ್ಷೆಯಲ್ಲಿ ಜನತೆಗೆ ತೀವ್ರ ನಿರಾಸೆಯಾಗಿದೆ. ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಮರಿಚಿಕೆಯಾಗಿದೆ. ಮೂಲಭೂತ ಸೌಕರ್ಯಗಳ ಅನುಷ್ಠಾನದಲ್ಲೂ ಹಿಂದೆ ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಸ ವಿಲೇವಾರಿಯಲ್ಲಿ ಪ.ಪಂ ವಿಫಲ:

ಕಸ ವಿಲೇವಾರಿ ಮತ್ತು ಸ್ವಚ್ಚತಾ ವಿಷಯಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಎರಡು ಬಾರಿ, ಕೇಂದ್ರ ಸರಕಾರದಿಂದ ಕೊಡಮಾಡಲಾಗುವ
ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತಿಕರಣ್, ನೈರ್ಮಲ್ಯ ರತ್ನ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದ್ದ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯೂ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಕಾರ್ಯವೈಖರಿಯಲ್ಲಿ ಸಂಪೂರ್ಣ ನೆಲಕಚ್ಚಿದೆ. ಮನೆ ಮನೆಯಲ್ಲಿ ಕಸ ವಿಂಗಡಣೆಯ ಕೆಲಸ ನಿಂತಿದೆ. ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಸ್ವಚ್ಚತಾ ವಾಹನಗಳು ತೆರಳುವುದೇ ಕಷ್ಟಕರವಾಗಿದೆ. ಇದರಿಂದಾಗಿ ಕಸದ ಸಮಸ್ಯೆ ಉಲ್ಬಣವಾಗಿದೆ.

ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ:

ವೈಜ್ಞಾನಿಕವಾಗಿ ಕಸ ಸಂಗ್ರಹ ಮಾಡದ ಪಟ್ಟಣ ಪಂಚಾಯತಿಯ ವೈಫಲ್ಯದಿಂದಾಗಿ ವರದನಹಳ್ಳಿ ಬಳಿ ಅನಧಿಕೃತವಾಗಿ ಮಿನಿ ಎಂಎಸ್ಜಿಪಿ ಘಟಕ ಸೃಷ್ಟಿಯಾಗಿದೆ. ಹಸಿ ಕಸ, ಒಣಕಸ, ಪ್ಲಾಸ್ಟಿಕ್, ಘನತ್ಯಾಜ್ಯ ಹೀಗೆ ಯಾವುದೇ ರೀತಿಯಲ್ಲಿ ವಿಂಗಡಣೆ ಮಾಡದೆ ಕಸ ಸಂಗ್ರಹ ಮಾಡಿ ವರದನಹಳ್ಳಿ ಬಳಿಯ ಕಲ್ಲು ಬಂಡೆ ಹಳ್ಳದ ಬಳಿ ಸುರಿದು ರಾಶಿ ರಾಶಿ ಕಸಕ್ಕೆ ಬೆಂಕಿ ಇಡಲಾಗ್ತಿದೆ.

ವಿಷ ಗಾಳಿ, ವಿಷ ನೀರು:

ಅವೈಜ್ಞಾನಿಕವಾಗಿ ಸುರಿದಿರುವ ರಾಶಿ ರಾಶಿ ಕಸಕ್ಕೆ ಪ್ರತಿನಿತ್ಯ ಬೆಂಕಿ ಇಡಲಾಗುತ್ತಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿನ ವಿಷಯುಕ್ತ ಗಾಳಿ ಸೇವಿಸುವಂತಾಗಿದೆ. ದನಕರು ಹಾಗೂ ಕುರಿ ಮೇಕೆಗಳಿಗೆ ವಿಷಯುಕ್ತ ನೀರನ್ನು ಕುಡಿಯಬೇಕಾಗಿದೆ.

ಮ್ಯೂಸಿಯಂ ಆದ ತ್ಯಾಜ್ಯ ವಿಲೇವಾರಿ ಘಟಕ.

2019 ನೇ ಸಾಲಿನಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಂತ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕವನ್ನು ಸ್ಥಾಪನೆ ಮಾಡಲಾಯಿತು. ಈ ಘಟಕಕ್ಕೆ ಅಕ್ಕಪಕ್ಕದ ರಾಜ್ಯಗಳಿಂದ, ವಿವಿಧ ಜಿಲ್ಲೆಗಳಿಂದ ಹಾಗೂ ದೇಶ, ವಿದೇಶಗಳಿಂದ ಜನಪ್ರತಿನಿಧಿಗಳ ತಂಡ ಆಗಮಿಸಿ ಇಲ್ಲಿನ ಕಸ ಘಟಕ, ವಿಲೇವಾರಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಆದರೀಗ ತ್ಯಾಜ್ಯ ವಿಲೇವಾರಿ ಘಟಕ ಬಹುತೇಕ ನಿಷ್ಕ್ರಿಯವಾಗಿದ್ದು, ಕೇವಲ ಮ್ಯೂಸಿಯಂನಂತೆ ನೋಡಲಷ್ಟೆ ಚೆಂದವಾಗಿದೆ.

ಕಸದ ಅವ್ಯವಸ್ಥೆ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಯಾವುದೇ ಪ್ರಯೋಜನವಾಗಿಲ್ಲ. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ನೇಮಕವಾಗಬೇಕು. ಆದರೆ ಈ ಪ.ಪಂಚಾಯತಿಗೆ ಕಂದಾಯ ನಿರೀಕ್ಷಕ ಅಧಿಕಾರಿ ಬಡ್ತಿ ಆಧಾರದ ಮೇಲೆ ಈ ಕುರ್ಚಿಯಲ್ಲಿ ಕುಳಿತಿದ್ದಾರೆ. ಅಭಿವೃದ್ಧಿ ಮಾಡುವ ಬಗ್ಗೆ ಯಾವುದೇ ಮಾಹಿತಿಯೇ ಇಲ್ಲ. ತಮಗಿಷ್ಟ ಬಂದಂತೆ ತೆರಿಗೆ ವಸೂಲಿ ಮಾಡಿಕೊಂಡು ಅಂಧಾ ದರ್ಬಾರ್ ನಡೆಸುತ್ತಿದ್ದಾರೆ. ಇಂತ ಅಧಿಕಾರಿಯನ್ನು ವರ್ಗಾವಣೆ ಮಾಡಿ ಅರ್ಹ ಕೆಎಎಸ್ ಅಧಿಕಾರಿಯನ್ನು ನೇಮಿಸಿ ಅಭಿವೃದ್ಧಿಗೆ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಪಂಚಾಯತಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಮಾಡಲಾಗುವುದು ಎಂದು ಮಾಜಿ ಸದಸ್ಯ ಅಂಬರೀಶ್ ತಿಳಿಸಿದರು.

ಟ್ರ್ಯಾಕ್ಟರ್ ಹಾಗೂ ಸ್ವಚ್ಚತಾ ವಾಹನಗಳ ಸಂಖ್ಯೆ ಕಡಿಮೆ ಇದೆ. ಸಿಬ್ಬಂದಿಯ ಸಂಖ್ಯೆಯೂ ಕಡಿಮೆ ಇದೆ. ಘನತ್ಯಾಜ್ಯ ಘಟಕ ಸೂಕ್ತವಾಗಿ ಕೆಲಸ ಮಾಡುತ್ತಿದೆ. ಮುಂದೆ ಮತ್ತಷ್ಟು ಸುಸಜ್ಜಿತವಾಗಿ ನಡೆಸಲಾಗುವುದು ಎಂದು ಬಾಶೆಟ್ಟಿಹಳ್ಳಿ ಪ.ಪಂ ಮುಖ್ಯಾಧಿಕಾರಿ ಮುನಿರಾಜು ಎಂದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

4 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

11 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

22 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago