ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆರೆ ಅಂಗಳದಲ್ಲಿ ಸ್ವಚ್ಚತಾ ಕಾರ್ಯ

ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಸಹಯೋಗದೊಂದಿಗೆ ಬಾಶೆಟ್ಟಿಹಳ್ಳಿ ಕೆರೆ ಅಂಗಳದಲ್ಲಿ ಪ್ಲಾಸ್ಟಿಕ್ ಕವರ್, ಗಿಡಗಂಟಿಗಳ ತೆರವು, ವಿವಿಧ ಸಸಿಗಳನ್ನು ನೆಟ್ಟು ನೀರೆರೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ, ಕೆರೆಯ ಸ್ವಚ್ಛತೆ, ಅಭಿವೃದ್ಧಿಗೆ ಪಟ್ಟಣ ಪಂಚಾಯುತಿ ವತಿಯಿಂದ ಸಹಕಾರ ಇದ್ದೇ ಇರುತ್ತದೆ. ಕೆರೆ ಕಟ್ಟೆ ಮೇಲೆ ವಾಕಿಂಗ್ ಪಾಥ್, ಪಾರ್ಕ್ ಮಾಡಲು ಶಾಸಕರು ಬಳಿ ಮನವಿ ಮಾಡಲು ನಿರ್ಧರಿಸಿದ್ದೇವೆ, ಕೆರೆ ಅಭಿವೃದ್ಧಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಸದಸ್ಯ ಲೋಹಿತ್, ವಿಶ್ವ ಪರಿಸರ ದಿನ ಹಾಗೂ ಸಾಗರ ದಿನದ ಅಂಗವಾಗಿ ಕೆರೆಗಳ ಸ್ವಚ್ಛತೆಗೆ ಮುಂದಾಗಿದ್ದು, ಸುಮಾರು 19 ಹೆಕ್ಟೇರ್ ವಿಸ್ತೀರ್ಣ ಹೊಂದಿರುವ ಬಾಶೆಟ್ಟಿಹಳ್ಳಿ ಕೆರೆಯ ನೀರಿನಲ್ಲಿ ಕರಗುವ ಲವಣಾಂಶ, ಆಮ್ಲಜನಕ, ಗಡುಸುತನ, ನೈಟ್ರೇಟ್, ಕ್ಯಾಲ್ಸಿಯಂ, ಸೇರಿದಂತೆ ವಿವಿಧ ರೀತಿಯ ಪರೀಕ್ಷೆ ಮಾಡಿ ಸ್ಥಳದಲ್ಲೇ ವರದಿ ಪಡೆಯಲಾಯಿತು. ಸದ್ಯ ಕೆರೆ ನೀರಿನ ಗುಣಮಟ್ಟ ಸಮತೋಲನದಲ್ಲಿದೆ ಎಂದು ಪರೀಕ್ಷಾ ವರದಿಯಿಂದ ತಿಳಿದು ಬಂದಿದೆ ಎಂದರು.

ಕೆರೆಯಲ್ಲಿ ಒಟ್ಟು 180 ಕೆಜಿ ಪ್ಲಾಸ್ಟಿಕ್ ನ್ನು ಹೊರತೆಗೆಯಲಾಯಿತು. ನಂತರ ಕೆರೆ ಕಟ್ಟೆ ಬಿರುಕು ಬಿಟ್ಟಿರುವ ಕಡೆ ಮಣ್ಣು, ಕಲ್ಲು ಹಾಕಿ ಭದ್ರಪಡಿಸಲಾಯಿತು ಎಂದು ತಿಳಿಸಿದರು.

ಈ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ, ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ರಾಹುಲ್, ಡಾ.ಶಾಂತನೂ ಗುಪ್ತ, ಪ್ರಗ್ಯಾ, ಸುರಭಿ, ಶೇಷಾದ್ರಿ, ನವೋದಯ ಚಾರಿಟಬಲ್ ಟ್ರಸ್ಟಿನ ಜನಾರ್ಧನ, ದೊಡ್ಡಬಳ್ಳಾಪುರ ಅಭಿವೃದ್ಧಿ ಸಮಿತಿಯ ವೆಂಕಟರಾಜು, ಪಟ್ಟಣ ಪಂಚಾಯತಿ ಅಧಿಕಾರಿಗಳಾದ ರಮೇಶ್ ಬಾಬು, ಕೀರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

14 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

20 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago