ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆರೆ ಅಂಗಳದಲ್ಲಿ ಸ್ವಚ್ಚತಾ ಕಾರ್ಯ

ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಸಹಯೋಗದೊಂದಿಗೆ ಬಾಶೆಟ್ಟಿಹಳ್ಳಿ ಕೆರೆ ಅಂಗಳದಲ್ಲಿ ಪ್ಲಾಸ್ಟಿಕ್ ಕವರ್, ಗಿಡಗಂಟಿಗಳ ತೆರವು, ವಿವಿಧ ಸಸಿಗಳನ್ನು ನೆಟ್ಟು ನೀರೆರೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ, ಕೆರೆಯ ಸ್ವಚ್ಛತೆ, ಅಭಿವೃದ್ಧಿಗೆ ಪಟ್ಟಣ ಪಂಚಾಯುತಿ ವತಿಯಿಂದ ಸಹಕಾರ ಇದ್ದೇ ಇರುತ್ತದೆ. ಕೆರೆ ಕಟ್ಟೆ ಮೇಲೆ ವಾಕಿಂಗ್ ಪಾಥ್, ಪಾರ್ಕ್ ಮಾಡಲು ಶಾಸಕರು ಬಳಿ ಮನವಿ ಮಾಡಲು ನಿರ್ಧರಿಸಿದ್ದೇವೆ, ಕೆರೆ ಅಭಿವೃದ್ಧಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಸದಸ್ಯ ಲೋಹಿತ್, ವಿಶ್ವ ಪರಿಸರ ದಿನ ಹಾಗೂ ಸಾಗರ ದಿನದ ಅಂಗವಾಗಿ ಕೆರೆಗಳ ಸ್ವಚ್ಛತೆಗೆ ಮುಂದಾಗಿದ್ದು, ಸುಮಾರು 19 ಹೆಕ್ಟೇರ್ ವಿಸ್ತೀರ್ಣ ಹೊಂದಿರುವ ಬಾಶೆಟ್ಟಿಹಳ್ಳಿ ಕೆರೆಯ ನೀರಿನಲ್ಲಿ ಕರಗುವ ಲವಣಾಂಶ, ಆಮ್ಲಜನಕ, ಗಡುಸುತನ, ನೈಟ್ರೇಟ್, ಕ್ಯಾಲ್ಸಿಯಂ, ಸೇರಿದಂತೆ ವಿವಿಧ ರೀತಿಯ ಪರೀಕ್ಷೆ ಮಾಡಿ ಸ್ಥಳದಲ್ಲೇ ವರದಿ ಪಡೆಯಲಾಯಿತು. ಸದ್ಯ ಕೆರೆ ನೀರಿನ ಗುಣಮಟ್ಟ ಸಮತೋಲನದಲ್ಲಿದೆ ಎಂದು ಪರೀಕ್ಷಾ ವರದಿಯಿಂದ ತಿಳಿದು ಬಂದಿದೆ ಎಂದರು.

ಕೆರೆಯಲ್ಲಿ ಒಟ್ಟು 180 ಕೆಜಿ ಪ್ಲಾಸ್ಟಿಕ್ ನ್ನು ಹೊರತೆಗೆಯಲಾಯಿತು. ನಂತರ ಕೆರೆ ಕಟ್ಟೆ ಬಿರುಕು ಬಿಟ್ಟಿರುವ ಕಡೆ ಮಣ್ಣು, ಕಲ್ಲು ಹಾಕಿ ಭದ್ರಪಡಿಸಲಾಯಿತು ಎಂದು ತಿಳಿಸಿದರು.

ಈ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ, ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ರಾಹುಲ್, ಡಾ.ಶಾಂತನೂ ಗುಪ್ತ, ಪ್ರಗ್ಯಾ, ಸುರಭಿ, ಶೇಷಾದ್ರಿ, ನವೋದಯ ಚಾರಿಟಬಲ್ ಟ್ರಸ್ಟಿನ ಜನಾರ್ಧನ, ದೊಡ್ಡಬಳ್ಳಾಪುರ ಅಭಿವೃದ್ಧಿ ಸಮಿತಿಯ ವೆಂಕಟರಾಜು, ಪಟ್ಟಣ ಪಂಚಾಯತಿ ಅಧಿಕಾರಿಗಳಾದ ರಮೇಶ್ ಬಾಬು, ಕೀರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago