ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆರೆ ಅಂಗಳದಲ್ಲಿ ಸ್ವಚ್ಚತಾ ಕಾರ್ಯ

ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಸಹಯೋಗದೊಂದಿಗೆ ಬಾಶೆಟ್ಟಿಹಳ್ಳಿ ಕೆರೆ ಅಂಗಳದಲ್ಲಿ ಪ್ಲಾಸ್ಟಿಕ್ ಕವರ್, ಗಿಡಗಂಟಿಗಳ ತೆರವು, ವಿವಿಧ ಸಸಿಗಳನ್ನು ನೆಟ್ಟು ನೀರೆರೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ, ಕೆರೆಯ ಸ್ವಚ್ಛತೆ, ಅಭಿವೃದ್ಧಿಗೆ ಪಟ್ಟಣ ಪಂಚಾಯುತಿ ವತಿಯಿಂದ ಸಹಕಾರ ಇದ್ದೇ ಇರುತ್ತದೆ. ಕೆರೆ ಕಟ್ಟೆ ಮೇಲೆ ವಾಕಿಂಗ್ ಪಾಥ್, ಪಾರ್ಕ್ ಮಾಡಲು ಶಾಸಕರು ಬಳಿ ಮನವಿ ಮಾಡಲು ನಿರ್ಧರಿಸಿದ್ದೇವೆ, ಕೆರೆ ಅಭಿವೃದ್ಧಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಸದಸ್ಯ ಲೋಹಿತ್, ವಿಶ್ವ ಪರಿಸರ ದಿನ ಹಾಗೂ ಸಾಗರ ದಿನದ ಅಂಗವಾಗಿ ಕೆರೆಗಳ ಸ್ವಚ್ಛತೆಗೆ ಮುಂದಾಗಿದ್ದು, ಸುಮಾರು 19 ಹೆಕ್ಟೇರ್ ವಿಸ್ತೀರ್ಣ ಹೊಂದಿರುವ ಬಾಶೆಟ್ಟಿಹಳ್ಳಿ ಕೆರೆಯ ನೀರಿನಲ್ಲಿ ಕರಗುವ ಲವಣಾಂಶ, ಆಮ್ಲಜನಕ, ಗಡುಸುತನ, ನೈಟ್ರೇಟ್, ಕ್ಯಾಲ್ಸಿಯಂ, ಸೇರಿದಂತೆ ವಿವಿಧ ರೀತಿಯ ಪರೀಕ್ಷೆ ಮಾಡಿ ಸ್ಥಳದಲ್ಲೇ ವರದಿ ಪಡೆಯಲಾಯಿತು. ಸದ್ಯ ಕೆರೆ ನೀರಿನ ಗುಣಮಟ್ಟ ಸಮತೋಲನದಲ್ಲಿದೆ ಎಂದು ಪರೀಕ್ಷಾ ವರದಿಯಿಂದ ತಿಳಿದು ಬಂದಿದೆ ಎಂದರು.

ಕೆರೆಯಲ್ಲಿ ಒಟ್ಟು 180 ಕೆಜಿ ಪ್ಲಾಸ್ಟಿಕ್ ನ್ನು ಹೊರತೆಗೆಯಲಾಯಿತು. ನಂತರ ಕೆರೆ ಕಟ್ಟೆ ಬಿರುಕು ಬಿಟ್ಟಿರುವ ಕಡೆ ಮಣ್ಣು, ಕಲ್ಲು ಹಾಕಿ ಭದ್ರಪಡಿಸಲಾಯಿತು ಎಂದು ತಿಳಿಸಿದರು.

ಈ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ, ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ರಾಹುಲ್, ಡಾ.ಶಾಂತನೂ ಗುಪ್ತ, ಪ್ರಗ್ಯಾ, ಸುರಭಿ, ಶೇಷಾದ್ರಿ, ನವೋದಯ ಚಾರಿಟಬಲ್ ಟ್ರಸ್ಟಿನ ಜನಾರ್ಧನ, ದೊಡ್ಡಬಳ್ಳಾಪುರ ಅಭಿವೃದ್ಧಿ ಸಮಿತಿಯ ವೆಂಕಟರಾಜು, ಪಟ್ಟಣ ಪಂಚಾಯತಿ ಅಧಿಕಾರಿಗಳಾದ ರಮೇಶ್ ಬಾಬು, ಕೀರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

51 minutes ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

58 minutes ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

3 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

4 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

4 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

5 hours ago