ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಗೆ ಉಪಚುನಾವಣೆ ದಿನಾಂಕ ನಿಗದಿ

ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಗೆ ಉಪ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.

ಹೊಸದಾಗಿ ರಚನೆಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪೈಕಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು ಒಟ್ಟು 19 ವಾರ್ಡ್ಗಗಳಿಗೆ ಚುನಾವಣೆ ನಡೆಯಲಿದೆ.

ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಪೈಕಿ ದೊಡ್ಡಬಳ್ಳಾಪುರ ನಗರಸಭೆಗೆ ಉಪ ಚುನಾವಣೆ ಘೋಷಿಸಿದ್ದು ದೊಡ್ಡಬಳ್ಳಾಪುರದ 21 ನೇ ವಾರ್ಡ್ ನ ಹೇಮಾವತಿಪೇಟೆ ವಾರ್ಡ್ ನ ಸದಸ್ಯರ ಮರಣದಿಂದಾಗಿ ತೆರವಾಗಿರುವ ಒಂದು ವಾರ್ಡ್ ಗೆ ಉಪ ಚುನಾವಣೆ ನಡೆಯಲಿದೆ ಎಂದರು.

*ಚುನಾವಣೆ ವೇಳಾಪಟ್ಟಿ*

ಜಿಲ್ಲಾಧಿಕಾರಿಗಳಿಂದ 2025 ಡಿಸೆಂಬರ್ 02 ಮಂಗಳವಾರ ಅಧಿಸೂಚನೆ ಹೊರಡಿಸಲಾಗುವುದು. ಡಿಸೆಂಬರ್ 09 ಮಂಗಳವಾರ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿಸೆಂಬರ್ 10 ಬುಧವಾರ ರಂದು ನಾಮಪತ್ರಗಳನ್ನು ಪರಿಶೀಲಿಸುವುದು. ಡಿಸೆಂಬರ್ 12 ಶುಕ್ರವಾರ ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಡಿಸೆಂಬರ್ 21 ಭಾನುವಾರ ಮತದಾನ (ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ) ಮತದಾನ ನಡೆಯಲಿದೆ. ಮರು ಮತದಾನ ಇದ್ದಲ್ಲಿ ಡಿಸೆಂಬರ್ 23 ಮಂಗಳವಾರ ರಂದು(ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ) ಮರು ಮತದಾನ ನಡೆಯಲಿದೆ. ಮತ ಎಣಿಕೆಯು ಡಿಸೆಂಬರ್ 24 ಬುಧವಾರದಂದು ಅಯಾ ತಾಲ್ಲೂಕು ಕೇಂದ್ರ ಸ್ಥಳಗಳಲ್ಲಿ (ಬೆಳಿಗ್ಗೆ 8:00 ಗಂಟೆಯಿಂದ) ಎಣಿಕೆ ನಡೆಯಲಿದೆ. ಡಿಸೆಂಬರ್ 24 ರಂದು ಚುನಾವಣೆ ಮುಕ್ತಾಯಗೊಳ್ಳಲಿದೆ.

ಚುನಾವಣಾ ಸಾದಾಚಾರ ಸಂಹಿತೆಯು 2025 ರ ಡಿಸೆಂಬರ್ 02 ರಿಂದ ಡಿಸೆಂಬರ್ 24 ರವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

43 minutes ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

15 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago