ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಗೆ ಉಪ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.
ಹೊಸದಾಗಿ ರಚನೆಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪೈಕಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು ಒಟ್ಟು 19 ವಾರ್ಡ್ಗಗಳಿಗೆ ಚುನಾವಣೆ ನಡೆಯಲಿದೆ.
ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಪೈಕಿ ದೊಡ್ಡಬಳ್ಳಾಪುರ ನಗರಸಭೆಗೆ ಉಪ ಚುನಾವಣೆ ಘೋಷಿಸಿದ್ದು ದೊಡ್ಡಬಳ್ಳಾಪುರದ 21 ನೇ ವಾರ್ಡ್ ನ ಹೇಮಾವತಿಪೇಟೆ ವಾರ್ಡ್ ನ ಸದಸ್ಯರ ಮರಣದಿಂದಾಗಿ ತೆರವಾಗಿರುವ ಒಂದು ವಾರ್ಡ್ ಗೆ ಉಪ ಚುನಾವಣೆ ನಡೆಯಲಿದೆ ಎಂದರು.
*ಚುನಾವಣೆ ವೇಳಾಪಟ್ಟಿ*
ಜಿಲ್ಲಾಧಿಕಾರಿಗಳಿಂದ 2025 ಡಿಸೆಂಬರ್ 02 ಮಂಗಳವಾರ ಅಧಿಸೂಚನೆ ಹೊರಡಿಸಲಾಗುವುದು. ಡಿಸೆಂಬರ್ 09 ಮಂಗಳವಾರ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿಸೆಂಬರ್ 10 ಬುಧವಾರ ರಂದು ನಾಮಪತ್ರಗಳನ್ನು ಪರಿಶೀಲಿಸುವುದು. ಡಿಸೆಂಬರ್ 12 ಶುಕ್ರವಾರ ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಡಿಸೆಂಬರ್ 21 ಭಾನುವಾರ ಮತದಾನ (ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ) ಮತದಾನ ನಡೆಯಲಿದೆ. ಮರು ಮತದಾನ ಇದ್ದಲ್ಲಿ ಡಿಸೆಂಬರ್ 23 ಮಂಗಳವಾರ ರಂದು(ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ) ಮರು ಮತದಾನ ನಡೆಯಲಿದೆ. ಮತ ಎಣಿಕೆಯು ಡಿಸೆಂಬರ್ 24 ಬುಧವಾರದಂದು ಅಯಾ ತಾಲ್ಲೂಕು ಕೇಂದ್ರ ಸ್ಥಳಗಳಲ್ಲಿ (ಬೆಳಿಗ್ಗೆ 8:00 ಗಂಟೆಯಿಂದ) ಎಣಿಕೆ ನಡೆಯಲಿದೆ. ಡಿಸೆಂಬರ್ 24 ರಂದು ಚುನಾವಣೆ ಮುಕ್ತಾಯಗೊಳ್ಳಲಿದೆ.
ಚುನಾವಣಾ ಸಾದಾಚಾರ ಸಂಹಿತೆಯು 2025 ರ ಡಿಸೆಂಬರ್ 02 ರಿಂದ ಡಿಸೆಂಬರ್ 24 ರವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…