ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: 8ನೇ ವಾರ್ಡ್ ಎಳ್ಳುಪುರ ಬಿಸಿಎಂ ಎ ಪಕ್ಷೇತರ ಅಭ್ಯರ್ಥಿಯಾಗಿ ರವಿಕುಮಾರ್ ಕೆ.ಎಂ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಡಿ.21 ರಂದು ನಡೆಯಲಿದ್ದು, ಇಂದು 33 ನಾಮಪತ್ರಗಳು ಸಲ್ಲಿಕೆಯಾಗಿವೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11ರಿಂದ 19ನೇ ವಾರ್ಡ್‌ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ.

ಇಂದು 8ನೇ ವಾರ್ಡ್ ಎಳ್ಳುಪುರ ಬಿಸಿಎಂ ಎ ಪಕ್ಷೇತರ ಅಭ್ಯರ್ಥಿಯಾಗಿ ರವಿಕುಮಾರ್ ಕೆ.ಎಂ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿ ಮಾಧ್ಯಮದವರೊಂದಿಗೆ ರವಿಕುಮಾರ್ ಕೆ.ಎಂ ಮಾತನಾಡಿ, ಕಾರ್ಮಿಕರು, ರೈತರು, ಮಹಿಳೆಯರು, ಯುವಕರ ಪರವಾಗಿ ಹಗಲಿರುಳು ಕೆಲಸ ಮಾಡುತ್ತೇವೆ. ಎಳ್ಳುಪುರ ವಾರ್ಡ್ ನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಹಾಗೂ ನಿಮ್ಮ ಸೇವೆ ಮಾಡಲು ನನಗೆ ಮತ ಚಲಾಯಿಸುವ ಮೂಲಕ ಅವಕಾಶ ಮಾಡಿಕೊಡಬೇಕು. ನಾನು ಯಾವದೇ ಪಕ್ಷದಡಿಯಲ್ಲಿ ಸ್ಪರ್ಧಿಸುತ್ತಿಲ್ಲ. ನಾನು ಜನದನಿ ವೇದಿಕೆಯಲ್ಲಿ ಇದ್ದುಕೊಂಡು ಹೋರಾಟಗಳನ್ನು ಮಾಡುತ್ತಾ, ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರಗಳ ಕಿವಿಹಿಂಡುವ ಕೆಲಸ ಮಾಡುತ್ತಿದ್ದೇನೆ ಎಂದರು.

ಇಷ್ಟು ದಿನ ಪ್ರಾದೇಶಿಕ ಹಾಗೂ ಕೇಂದ್ರ ರಾಜಕೀಯ ಪಕ್ಷಗಳ ರಾಜಕೀಯ ಮುಖಂಡರ ಬಳಿ ಎಳ್ಳುಪುರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ. ಆದ್ದರಿಂದ ನಾನು ಈ ರಾಜಕೀಯ ಪಕ್ಷಗಳನ್ನು ನಂಬದೇ ಎಳ್ಳುಪುರವನ್ನು ಅಭಿವೃದ್ಧಿ ಪಡಿಸಲು ಪಕ್ಷೇತರನಾಗಿ ಸ್ಪರ್ಧಿಸಿದ್ದೇನೆ ಎಂದರು.

ಯಾವುದೇ ಪಕ್ಷಗಳ ಆಮಿಷಕ್ಕೆ ಬಲಿಯಾಗದೇ ಪಕ್ಷೇತರ ಅಭ್ಯರ್ಥಿಯಾದ ನನಗೆ ಮತಚಲಾಯಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಎಳ್ಳುಪುರ ಮತದಾರರಲ್ಲಿ ಮನವಿ ಮಾಡಿದರು.

ಎಳ್ಳುಪುರ ವಾರ್ಡ್ ಗೆ ಮೂಲಭೂತ ಸೌಕರ್ಯಗಳು, ಉದ್ಯೋಗ‌‌ ಕಲ್ಪಿಸುವುದು, ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಸದ್ವಿನಿಯೋಗ ಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

6 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

7 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

18 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

1 day ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

1 day ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

1 day ago