ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಡಿ.21 ರಂದು ನಡೆಯಲಿದ್ದು, ಇಂದು 33 ನಾಮಪತ್ರಗಳು ಸಲ್ಲಿಕೆಯಾಗಿವೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11ರಿಂದ 19ನೇ ವಾರ್ಡ್ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.
ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ.
ಇಂದು 8ನೇ ವಾರ್ಡ್ ಎಳ್ಳುಪುರ ಬಿಸಿಎಂ ಎ ಪಕ್ಷೇತರ ಅಭ್ಯರ್ಥಿಯಾಗಿ ರವಿಕುಮಾರ್ ಕೆ.ಎಂ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿ ಮಾಧ್ಯಮದವರೊಂದಿಗೆ ರವಿಕುಮಾರ್ ಕೆ.ಎಂ ಮಾತನಾಡಿ, ಕಾರ್ಮಿಕರು, ರೈತರು, ಮಹಿಳೆಯರು, ಯುವಕರ ಪರವಾಗಿ ಹಗಲಿರುಳು ಕೆಲಸ ಮಾಡುತ್ತೇವೆ. ಎಳ್ಳುಪುರ ವಾರ್ಡ್ ನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಹಾಗೂ ನಿಮ್ಮ ಸೇವೆ ಮಾಡಲು ನನಗೆ ಮತ ಚಲಾಯಿಸುವ ಮೂಲಕ ಅವಕಾಶ ಮಾಡಿಕೊಡಬೇಕು. ನಾನು ಯಾವದೇ ಪಕ್ಷದಡಿಯಲ್ಲಿ ಸ್ಪರ್ಧಿಸುತ್ತಿಲ್ಲ. ನಾನು ಜನದನಿ ವೇದಿಕೆಯಲ್ಲಿ ಇದ್ದುಕೊಂಡು ಹೋರಾಟಗಳನ್ನು ಮಾಡುತ್ತಾ, ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರಗಳ ಕಿವಿಹಿಂಡುವ ಕೆಲಸ ಮಾಡುತ್ತಿದ್ದೇನೆ ಎಂದರು.
ಇಷ್ಟು ದಿನ ಪ್ರಾದೇಶಿಕ ಹಾಗೂ ಕೇಂದ್ರ ರಾಜಕೀಯ ಪಕ್ಷಗಳ ರಾಜಕೀಯ ಮುಖಂಡರ ಬಳಿ ಎಳ್ಳುಪುರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ. ಆದ್ದರಿಂದ ನಾನು ಈ ರಾಜಕೀಯ ಪಕ್ಷಗಳನ್ನು ನಂಬದೇ ಎಳ್ಳುಪುರವನ್ನು ಅಭಿವೃದ್ಧಿ ಪಡಿಸಲು ಪಕ್ಷೇತರನಾಗಿ ಸ್ಪರ್ಧಿಸಿದ್ದೇನೆ ಎಂದರು.
ಯಾವುದೇ ಪಕ್ಷಗಳ ಆಮಿಷಕ್ಕೆ ಬಲಿಯಾಗದೇ ಪಕ್ಷೇತರ ಅಭ್ಯರ್ಥಿಯಾದ ನನಗೆ ಮತಚಲಾಯಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಎಳ್ಳುಪುರ ಮತದಾರರಲ್ಲಿ ಮನವಿ ಮಾಡಿದರು.
ಎಳ್ಳುಪುರ ವಾರ್ಡ್ ಗೆ ಮೂಲಭೂತ ಸೌಕರ್ಯಗಳು, ಉದ್ಯೋಗ ಕಲ್ಪಿಸುವುದು, ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಸದ್ವಿನಿಯೋಗ ಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…