ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: 8ನೇ ವಾರ್ಡ್ ಎಳ್ಳುಪುರ ಬಿಸಿಎಂ ಎ ಪಕ್ಷೇತರ ಅಭ್ಯರ್ಥಿಯಾಗಿ ರವಿಕುಮಾರ್ ಕೆ.ಎಂ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಡಿ.21 ರಂದು ನಡೆಯಲಿದ್ದು, ಇಂದು 33 ನಾಮಪತ್ರಗಳು ಸಲ್ಲಿಕೆಯಾಗಿವೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11ರಿಂದ 19ನೇ ವಾರ್ಡ್‌ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ.

ಇಂದು 8ನೇ ವಾರ್ಡ್ ಎಳ್ಳುಪುರ ಬಿಸಿಎಂ ಎ ಪಕ್ಷೇತರ ಅಭ್ಯರ್ಥಿಯಾಗಿ ರವಿಕುಮಾರ್ ಕೆ.ಎಂ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿ ಮಾಧ್ಯಮದವರೊಂದಿಗೆ ರವಿಕುಮಾರ್ ಕೆ.ಎಂ ಮಾತನಾಡಿ, ಕಾರ್ಮಿಕರು, ರೈತರು, ಮಹಿಳೆಯರು, ಯುವಕರ ಪರವಾಗಿ ಹಗಲಿರುಳು ಕೆಲಸ ಮಾಡುತ್ತೇವೆ. ಎಳ್ಳುಪುರ ವಾರ್ಡ್ ನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಹಾಗೂ ನಿಮ್ಮ ಸೇವೆ ಮಾಡಲು ನನಗೆ ಮತ ಚಲಾಯಿಸುವ ಮೂಲಕ ಅವಕಾಶ ಮಾಡಿಕೊಡಬೇಕು. ನಾನು ಯಾವದೇ ಪಕ್ಷದಡಿಯಲ್ಲಿ ಸ್ಪರ್ಧಿಸುತ್ತಿಲ್ಲ. ನಾನು ಜನದನಿ ವೇದಿಕೆಯಲ್ಲಿ ಇದ್ದುಕೊಂಡು ಹೋರಾಟಗಳನ್ನು ಮಾಡುತ್ತಾ, ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರಗಳ ಕಿವಿಹಿಂಡುವ ಕೆಲಸ ಮಾಡುತ್ತಿದ್ದೇನೆ ಎಂದರು.

ಇಷ್ಟು ದಿನ ಪ್ರಾದೇಶಿಕ ಹಾಗೂ ಕೇಂದ್ರ ರಾಜಕೀಯ ಪಕ್ಷಗಳ ರಾಜಕೀಯ ಮುಖಂಡರ ಬಳಿ ಎಳ್ಳುಪುರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ. ಆದ್ದರಿಂದ ನಾನು ಈ ರಾಜಕೀಯ ಪಕ್ಷಗಳನ್ನು ನಂಬದೇ ಎಳ್ಳುಪುರವನ್ನು ಅಭಿವೃದ್ಧಿ ಪಡಿಸಲು ಪಕ್ಷೇತರನಾಗಿ ಸ್ಪರ್ಧಿಸಿದ್ದೇನೆ ಎಂದರು.

ಯಾವುದೇ ಪಕ್ಷಗಳ ಆಮಿಷಕ್ಕೆ ಬಲಿಯಾಗದೇ ಪಕ್ಷೇತರ ಅಭ್ಯರ್ಥಿಯಾದ ನನಗೆ ಮತಚಲಾಯಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಎಳ್ಳುಪುರ ಮತದಾರರಲ್ಲಿ ಮನವಿ ಮಾಡಿದರು.

ಎಳ್ಳುಪುರ ವಾರ್ಡ್ ಗೆ ಮೂಲಭೂತ ಸೌಕರ್ಯಗಳು, ಉದ್ಯೋಗ‌‌ ಕಲ್ಪಿಸುವುದು, ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಸದ್ವಿನಿಯೋಗ ಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

4 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

14 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

15 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago