ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: 3ನೇ ವಾರ್ಡ್ ಓಬದೇನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮನು ಆರ್ ವಿ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಡಿ.21 ರಂದು ನಡೆಯಲಿದ್ದು, ಇಂದು 19ವಾರ್ಡ್ ಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ನಾಮ ಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11ರಿಂದ 19ನೇ ವಾರ್ಡ್‌ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿತ್ತು.

ಇಂದು (ಡಿ.9) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿತ್ತು. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ.

ಇಂದು (ಡಿ.9) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಎಲ್ಲಾ ಪಕ್ಷ ಹಾಗೂ ಪಕ್ಷೇತರರು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.. 3ನೇ ವಾರ್ಡ್ ಓಬದೇನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮನು ಆರ್ ವಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿ ಮಾಧ್ಯಮದವರೊಂದಿಗೆ ಅರ್ ವಿ ಮನು ಮಾತನಾಡಿ, ಕಾರ್ಮಿಕರು, ರೈತರು, ಮಹಿಳೆಯರು, ಯುವಕರ ಪರವಾಗಿ ಹಗಲಿರುಳು ಕೆಲಸ ಮಾಡುತ್ತೇವೆ. ಓಬದೇನಹಳ್ಳಿ ವಾರ್ಡ್ ನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ನನಗೆ ಮತ ಚಲಾಯಿಸುವ ಮೂಲಕ ಅವಕಾಶ ಮಾಡಿಕೊಡಬೇಕು ಎಂದರು.

ಓಬದೇನಹಳ್ಳಿ ವಾರ್ಡ್ ಗೆ ಮೂಲಭೂತ ಸೌಕರ್ಯಗಳು ಒದಗಿಸುವುದು, ಜನರಿಗೆ ಉದ್ಯೋಗ‌‌ ಕಲ್ಪಿಸುವುದು, ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಸದ್ವಿನಿಯೋಗ ಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದರು….

ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಶಾಸಕ ಟಿ ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ಟಿ.ರಾಮಕೃಷ್ಣಯ್ಯ(ರಾಮಣ್ಣ), ಹಿರಿಯ ಕಾಂಗ್ರೆಸ್ ಮುಖಂಡರು, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್ ವಿ ಮಹೇಶ್ ಕುಮಾರ್, ಆರ್ ವಿ ಶಿವಕುಮಾರ್, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

7 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

7 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

18 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

18 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

20 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

23 hours ago