ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯರ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ 2025 ನೇ ಡಿಸೆಂಬರ್ 19 ರ ಸಂಜೆ 05.00 ಗಂಟೆಯಿಂದ ಡಿಸೆಂಬರ್ 21 ರ ರಾತ್ರಿ 12.00 ಗಂಟೆಯವರೆಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ. ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ದಿನಾಂಕ:21.12.2025 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ/ಮೆರವಣಿಗೆಗಳನ್ನು ಮತ್ತು ಶವಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನಡೆಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…