ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಡಿ.19 ರಿಂದ 21ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯರ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ 2025 ನೇ ಡಿಸೆಂಬರ್ 19 ರ ಸಂಜೆ 05.00 ಗಂಟೆಯಿಂದ ಡಿಸೆಂಬರ್ 21 ರ ರಾತ್ರಿ 12.00 ಗಂಟೆಯವರೆಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ. ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ದಿನಾಂಕ:21.12.2025 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ/ಮೆರವಣಿಗೆಗಳನ್ನು ಮತ್ತು ಶವಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನಡೆಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

6 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

6 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

6 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

11 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

17 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

18 hours ago