ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಡಿ.19 ರಿಂದ 21ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯರ ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ 2025 ನೇ ಡಿಸೆಂಬರ್ 19 ರ ಸಂಜೆ 05.00 ಗಂಟೆಯಿಂದ ಡಿಸೆಂಬರ್ 21 ರ ರಾತ್ರಿ 12.00 ಗಂಟೆಯವರೆಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ. ಸಾರ್ವಜನಿಕರು ಮತದಾನ ಮಾಡಲು ಅನುಕೂಲವಾಗುವಂತೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ದೊಡ್ಡಬಳ್ಳಾಪುರ ನಗರಸಭೆಯ 21-ಹೇಮಾವತಿ ಪೇಟೆ ವಾರ್ಡ್ ವ್ಯಾಪ್ತಿಯಲ್ಲಿ ದಿನಾಂಕ:21.12.2025 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ/ಮೆರವಣಿಗೆಗಳನ್ನು ಮತ್ತು ಶವಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನಡೆಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

16 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

24 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago