ಬಾಶೆಟ್ಟಿಹಳ್ಳಿ ಪಪ ಚುನಾವಣೆ: ಬಿಜೆಪಿ ಜಯ: ಗೆಲವು ಮನೆಹಾಳು ಮಾಡುತ್ತೇನೆ, ಸೋಲಿಸುತ್ತೇನೆ ಎಂದು ಹೋದವರು ಗೆದ್ದಿರುವ ಇತಿಹಾಸವಿಲ್ಲ: ಒಳ ಒಪ್ಪಂದ‌ ಮಾಡಿಕೊಂಡವರಿಗೆ ಪ್ರತ್ಯುತ್ತರ ನೀಡಿದ ಬಾಶೆಟ್ಟಿಹಳ್ಳಿ ಪಪ ಚುನಾವಣೆ: ದರ್ಪ, ದುರಹಾಂಕರ ತಿರಸ್ಕಾರ, ನಿಷ್ಠೆ, ಪ್ರಾಮಾಣಿಕತೆಗೆ ಜಯಕಾರ- ಶಾಸಕ‌ಧೀರಜ್ ಮುನಿರಾಜ್

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್ 3, ಜೆಡಿಎಸ್ 1, ಪಕ್ಷೇತರ 1 ಸ್ಥಾನಗಳಲ್ಲಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ..

ಇನ್ನೂ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಾಗಿತ್ತು. ಕಾರಣಾಂತರಗಳಿಂದ ಅದು ಆಗಿಲ್ಲ. ಅರೆಹಳ್ಳಿ ಗುಡ್ಡದಹಳ್ಳಿ ಕ್ಷೇತ್ರದ ಗುಂಡಣ್ಣ ಹೃದಾಯಾಘಾತದಿಂದ ಮರಣಹೊಂದಿದ ಕಾರಣ ಅಲ್ಲಿ ಸೋತಿದ್ದೇವೆ. ಪ್ರಾಮಾಣಿಕ ಬಿಜೆಪಿ ಸ್ಪರ್ಧಿಗಳ ಗೆಲುವಿಗೆ ನಾವು, ಸಂಘಟನೆ, ಮುಖಂಡರು, ಕಾರ್ಯಕರ್ತರು ಅವಿರತ ಶ್ರಮಿಸಲಾಗಿದೆ….ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

10ದಿನ ಅಧಿವೇಶನದಲ್ಲಿ ಒಂದು ದಿನ ಮಾತ್ರ ಹೋಗಿ ಇನ್ನು 9 ದಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಗೆಲುವಿಗೆ ಶ್ರಮಿಸಿದ್ದೇವೆ. ನನ್ನ ಎರಡೂವರೆ ವರ್ಷಗಳ ಕೆಲಸದಲ್ಲಿ ಬಾಶೆಟ್ಟಿಹಳ್ಳಿಗೆ ಆರನೇ ಹಂತದಲ್ಲಿ ಕಾವೇರಿ ನೀರನ್ನು ಹರಿಸಲು ಶ್ರಮಿಸಿದ್ದೇನೆ. 41 ಕೋಟಿ ವೆಚ್ಚದಲ್ಲಿ ಮನೆ ಮನೆಗೆ ಜಲಜೀವನ್ ಮಿಷನ್ ಯೋಜನೆ ತಂದಿದ್ದೇನೆ. ಉಚಿತವಾಗಿ ಐದೂವರೆ ಎಕರೆ ಜಾಗ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡಿಸಲಾಗಿದೆ. 20 ಕಸ ವಾಹನಗಳನ್ನು ಕೊಟ್ಟಿದ್ದೇನೆ. ಮೂರವರೆ ಕೋಟಿ ಇದ್ದಂತಹ ಆದಾಯವನ್ನು 18ಕೋಟಿಗೆ ಏರಿಸಲಾಗಿದೆ. ಭ್ರಷ್ಟಾಚಾರ ರಹಿತ ಆಡಳಿತ, ಇಡೀ ರಾಜ್ಯದಲ್ಲೇ ಅತಿ ಹೆಚ್ಚು ಖಾತೆಗಳನ್ನು ಮಾಡಿಸಿದ್ದೇವೆ. ಹೀಗೆ ಪ್ರಾಮಾಣಿಕತೆ, ಪಕ್ಷ ನಿಷ್ಠೆಯಿಂದ ಬಿಜೆಪಿ ಗೆದ್ದಿದೆ ಎಂದು ಹೇಳಿದರು….

ಅಭ್ಯರ್ಥಿಗಳ ಶ್ರಮ, ಪರಿಶ್ರಮ, ಬದ್ಧತೆ, ಪಕ್ಷ ನಿಷ್ಠೆಗೆ ಜನ ಬೆಂಬಲ ಸೂಚಿಸಿದ್ದಾರೆ…ಎಳ್ಳುಪುರ ಏನು ಜಿದ್ದಜಿದ್ದಿಯಾಗಿ ಇರಲಿಲ್ಲ. ಬಿಜೆಪಿ ಗೆದ್ದೇ ಗೆಲ್ಲುವ ನಿರೀಕ್ಷೆ ಇತ್ತು. ಎಳ್ಳುಪುರ ನನಗೂ ಲೀಡ್ ಕೊಟ್ಟಂತಹ ವಾರ್ಡ್, ಪಾರ್ಟಿ ನಿಷ್ಠರು ಬಿಜೆಪಿ ಗೆಲುವಿಗೆ ಕೆಲಸ ಮಾಡಿದ್ದಾರೆ… ಒಬ್ಬ ಪ್ರಾಮಾಣಿಕ ಕಾರ್ಯಕರ್ತನನ್ನು ಗೆಲ್ಲಿಸಿಕೊಂಡಿದ್ದೇವೆ. ಇಲ್ಲಿನ ಅಭ್ಯರ್ಥಿ ಮಧು ಅವರಿಗೆ ಪ್ರತಿ ಮತದಾರನ ಸಂಪರ್ಕವಿತ್ತು. ಒಳ್ಳತನಕ್ಕೆ ಬೆಲೆ ಇದೆ. ಕೆಲಸಕ್ಕೆ ಬೆಲೆ ಇದೆ. ದರ್ಪ ದುರಹಂಕಾರವನ್ನು ಜನ ತಿರಸ್ಕಾರ ಮಾಡಿದ್ದಾರೆ. ಬಂಡಾಯ ಇದ್ದ ಎಲ್ಲಾ ಕಡೆ ಬಿಜೆಪಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಾನು ಪ್ರತಿ ಮತದಾರನ ಮನೆಗೆ ಹೋಗಿ ಮತಯಾಚನೆ ಮಾಡಿದ್ದೇನೆ. ಮತ ಕೇಳೋದು ನನ್ನ ಕರ್ತವ್ಯ. ನಮ್ಮ ಶ್ರಮಕ್ಕೆ, ನಮ್ಮ ನಿಷ್ಠೆಗೆ ಮತದಾರ ಕೈಹಿಡಿದ್ದಾನೆ. ಇಲ್ಲಿ ಕಾಂಗ್ರೆಸ್ ಇಲ್ಲ ಗ್ಯಾರಂಟಿನೂ ಇಲ್ಲ. ಗ್ಯಾರಂಟಿಗೆ ವಾರೆಂಟಿ ಮುಗಿದಿದೆ. ಗ್ಯಾರಂಟಿನ ಜನ ಮನೆಕಡೆ ಕಳುಹಿಸುತ್ತಾರೆ. ಬಿಜೆಪಿ ಭದ್ರಕೋಟೆ ಬರೀ ಮಂಗಳೂರು, ಉತ್ತರ‌ ಕನ್ನಡ ಅಲ್ಲ, ಬೆಂಗಳೂರು ಸುತ್ತಮುತ್ತಲೂ ಇದೆ. ಮುಂದಿನ ದಿನಗಳಲ್ಲಿ ಎಲ್ಲಾ ಕಡೆ ಬಿಜೆಪಿ ಭದ್ರಕೋಟೆಯಾಗಿರುತ್ತದೆ ಎಂದರು.

ವರದನಹಳ್ಳಿಯಲ್ಲಿ ಮೈತ್ರಿ ಮಾಡಿಕೊಂಡಿದ್ವಿ, ಅಲ್ಲಿ ಮಹಿಳಾ ಸ್ಥಾನವನ್ನು ನಮಗೆ ಕೊಡಿ ಅಂದ್ರು, ಅಲ್ಲಿನ ಕಾರ್ಯಕರ್ತರು ನಮಗೆ ಸಹಕಾರ ಕೊಟ್ಟರು. ಚಂದನ ಅಕ್ಷಯ್ ಕುಮಾರ್ ಪರವಾಗೂ ಮತ ಕೇಳಿದ್ದೇನೆ. ಅಲ್ಲೂ ಅವರು ಗೆದ್ದಿದ್ದಾರೆ. ನಗರಸಭೆಯ ಹೇಮಾವತಿ ಪೇಟೆ ಉಪಚುನಾವಣೆಯಲ್ಲಿಯೂ ಬಿಜೆಪಿ ಗೆದ್ದಿದೆ. ಅದು ಬಿಜೆಪಿ ಭದ್ರಕೋಟೆ, ನನ್ನ ಚುನಾವಣೆಯಲ್ಲೂ ಅತಿ ಹೆಚ್ಚು ಲೀಡ್ ಕೊಟ್ಟಿತು ಎಂದರು..

ಪ್ರೇಮ್ ಕುಮಾರ್ ಅವರನ್ನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾರದರೂ ಒಬ್ಬ ವ್ಯಕ್ತಿ ಶ್ರಮಪಟ್ಟು ಎಲ್ಲರನ್ನು ಉದ್ಧರ ಮಾಡಲು ಪ್ರಯತ್ನಿಸಬೇಕು. ಅದನ್ನ ಬಿಟ್ಟು ಮನೆ ಹಾಳು ಮಾಡುತ್ತೇನೆ, ಸೋಲಿಸುತ್ತೇನೆ ಎಂದು ಹೇಳಿ ಹೋದವರೆಲ್ಲಾ ಮನೆ‌ಕಡೆ ನಡೆದಿದ್ದಾರೆ…

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

53 minutes ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

11 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

13 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago