ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ: ಪ.ಪಂ ಅಭಿವೃದ್ಧಿಗಾಗಿ 11 ಅಂಶಗಳ‌ ಈಡೇರಿಕೆಗಾಗಿ ಆಗ್ರಹ: ಆಗ್ರಹಾಂಶಗಳು ಇಲ್ಲಿವೆ ಓದಿ….

ಕೈಗಾರಿಕಾ ಪ್ರದೇಶದ ಕೇಂದ್ರ ಬಿಂದುವಾಗಿರುವ ಬಾಶೆಟ್ಟಿಹಳ್ಳಿ ವೃತ್ತದಲ್ಲಿ ಬಸ್ ನಿಲ್ದಾಣಗಳ ಶೆಲ್ಟರ್ ನಿರ್ಮಾಣ ಅತ್ಯಗತ್ಯವಾಗಿದೆ. ಸ್ಮಶಾನಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ವಿವಿಧ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣ ಸಾಲದು, ಮತ್ತಷ್ಟು ಹೆಚ್ಚಿಸಬೇಕು ಎಂದು ಅಂಬರೀಶ್ ಆಗ್ರಹಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಆಯ-ವ್ಯಯಕ್ಕೆ ಸಂಬಂಧಿಸಿ ಸಾರ್ವಜನಿಕರ ಪೂರ್ವಭಾವಿ ಸಭೆ ಮಂಗಳವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳೆಗಾಲಕ್ಕೂ ಮುನ್ನವೇ ಈ ಬಾರಿಯ ಬೇಸಿಗೆಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಮತ್ತು ಸ್ವಚ್ಚತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ದಿನೇ ದಿನೇ ಪಟ್ಟಣ ಪಂಚಾಯತಿ ಬೆಳೆಯುತ್ತಿರುವುದರಿಂದ ನಗರಕ್ಕೆ ಯುಜಿಡಿ ಅನುಷ್ಠಾನ ಅಗತ್ಯ ಇದೆ. ಹೀಗಾಗಿ ಯುಜಿಡಿ ಯೋಜನೆಗೆ ಹಣ ಮೀಸಲಿಟ್ಟು ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟರು.

ಬಾಶೆಟ್ಟಿಹಳ್ಳಿ ವಿಎಸ್ಎಸ್ಎನ್ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಮಾತನಾಡಿ ಬಾಶೆಟ್ಟಿಹಳ್ಳಿ ಪಂ.ಪ ವ್ಯಾಪ್ತಿಯಲ್ಲಿ ಬೆರಳೆಣಿಕೆಯಷ್ಟು ಕೆರೆಗಳು ಮಾತ್ರ ಉಳಿದಿವೆ. ಉಳಿದಿರುವ ಕೆರೆಗಳಿಗೂ ಕೈಗಾರಿಕೆಗಳ ತ್ಯಾಜ್ಯ ನೀರು ಹರಿಯುತ್ತಿವೆ. ಇದರಿಂದ ಕೆರೆಗಳಲ್ಲಿ ಮೀನುಗಳು ಸಾವನ್ನಪ್ಪಿ ಕೆರೆಗಳೇ ಇಲ್ಲದಂತಾಗುತ್ತದೆ. ಕೆರೆಗಳು ಮತ್ತು ರಾಜಕಾಲುವೆಗಳು ಸೇರಿದಂತೆ ಪಟ್ಟದ ಮುಖ್ಯರಸ್ತೆಗಳಲ್ಲಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ತೆಗೆದುಕೊಂಡು ತೆರವು ಕಾರ್ಯಾಚರಣೆಯನ್ನ ಆರಂಭಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಪ.ಪಂ  ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ ಕೆರೆಯ ಸುತ್ತಮುತ್ತಲಿನ ಎಲ್ಲಾ ಕಂಪನಿ, ಕಾರ್ಖಾನೆ, ಫ್ಯಾಕ್ಟರಿಗಳಿಗೆ ನೋಟಿಸ್ ನೀಡಿ ಶೀಘ್ರವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ರಸ್ತೆಗಳ ಪಕ್ಕದಲ್ಲಿ ಒತ್ತುವರಿ ತೆರವಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.

ಅತಿಮುಖ್ಯ ಆಗ್ರಹ

1. ಬ್ಯಾಂಕ್ ಸರ್ಕಲ್ ನಲ್ಲಿನ ಪುಟ್ ಪಾತ್ ನಲ್ಲಿ ಗ್ರಿಲ್ಸ್ ಅಳವಡಿಸುವುದು.

2. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಸ್ಮಶಾನಗಳಿಗೆ ಕಾಂಪೌಂಡ್ ನಿರ್ಮಾಣ

3. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಾದುಹೋಗಿರುವ ಬೆಂಗಳೂರು-ಹಿಂದೂಪುರ ಹೆದ್ದಾರಿ ರಸ್ತೆಯಲ್ಲಿ ಪಂಚಾಯತಿ ವತಿಯಿಂದ ಸ್ವಾಗತ ಮತ್ತು ಧನ್ಯವಾದ ಕಮಾನುಗಳ ನಿರ್ಮಾಣ

4. ನೂತನವಾಗಿ ವಾಣಿಜ್ಯ ಮಳಿಗೆಗಳ ನಿರ್ಮಾಣ

5. ಬಾಶೆಟ್ಟಿಹಳ್ಳಿ ಕೆರೆಯನ್ನ ಅಭಿವೃದ್ಧಿಪಡಿಸಿ, ವಾಕಿಂಗ್ ಟ್ರ್ಯಾಕ್ ಮತ್ತು ವಿಶ್ರಾಂತಿ ಚೇರ್ ಗಳನ್ನ ಹಾಕುವುದು.

6. ಅರಣ್ಯೀಕರಣ ಮಾಡಿ ಮರಗಳನ್ನ ಹಾಕುವುದು.

7. ರಸ್ತೆ ಬದಿಗಳಲ್ಲಿನ ಒತ್ತುವರಿ ತೆರವು ಕಾರ್ಯ ಮಾಡಿ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಬೇಕು.

8. ಬೀದಿ ಬದಿ ವ್ಯಾಪಾರಿಗಳ ಗಣತಿ ಮಾಡಿ ಸುಂಕ ವಸೂಲಿ ಕ್ರಮ ಜರುಗಿಸಬೇಕು.

9. ಕೆರೆಗಳಿಗೆ ಮುಳ್ಳುತಂತಿ ಹಾಕಿ ಫೆನ್ಸಿಂಗ್ ಮಾಡಿ, ಶಾಲಾ ವಿದ್ಯಾರ್ಥಿಗಳಿಗೆ ಮೈದಾನ ನಿರ್ಮಾಣ.

10. ಲಾರಿಗಳು ರಸ್ತೆಯಲ್ಲಿ ಪಾರ್ಕ್ ಮಾಡಲಾಗುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಲಾರಿಗಳ ತೆರವಿಗೆ ಕಂಪನಿಗಳ ವಿರುದ್ಧ ಕ್ರಮಕ್ಕೆ ನೀತಿ.

11. ಪ್ರತಿ ಗ್ರಾಮಗಳಿಗೂ ಚರಂಡಿ, ರಸ್ತೆ ವ್ಯವಸ್ಥೆಯನ್ನು‌ ಸಮರ್ಪಕವಾಗಿ ಮಾಡಬೇಕು. ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳು….

ಈ ವೇಳೆ ಲೆಕ್ಕಾಧಿಕಾರಿ ಪಾಂಶುಶಿಂಧೆ, ಎಫ್.ಡಿ.ಎ ಮೇಘನಾ, ಉಮಾಶಂಕರ್, ಮುಖಂಡರಾದ ಕೃಷ್ಣಪ್ಪ, ಪ್ರೇಮಕುಮಾರ್, ಸಿ ನಾರಾಯಣಸ್ವಾಮಿ , ಮುನಿರಾಜು, ಮುನಿಚಂದ್ರ, ಅಂಬರೀಶ್, ಕೃಷ್ಣಮೂರ್ತಿ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago