ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ: ಪ.ಪಂ ಅಭಿವೃದ್ಧಿಗಾಗಿ 11 ಅಂಶಗಳ‌ ಈಡೇರಿಕೆಗಾಗಿ ಆಗ್ರಹ: ಆಗ್ರಹಾಂಶಗಳು ಇಲ್ಲಿವೆ ಓದಿ….

ಕೈಗಾರಿಕಾ ಪ್ರದೇಶದ ಕೇಂದ್ರ ಬಿಂದುವಾಗಿರುವ ಬಾಶೆಟ್ಟಿಹಳ್ಳಿ ವೃತ್ತದಲ್ಲಿ ಬಸ್ ನಿಲ್ದಾಣಗಳ ಶೆಲ್ಟರ್ ನಿರ್ಮಾಣ ಅತ್ಯಗತ್ಯವಾಗಿದೆ. ಸ್ಮಶಾನಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ವಿವಿಧ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣ ಸಾಲದು, ಮತ್ತಷ್ಟು ಹೆಚ್ಚಿಸಬೇಕು ಎಂದು ಅಂಬರೀಶ್ ಆಗ್ರಹಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಆಯ-ವ್ಯಯಕ್ಕೆ ಸಂಬಂಧಿಸಿ ಸಾರ್ವಜನಿಕರ ಪೂರ್ವಭಾವಿ ಸಭೆ ಮಂಗಳವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳೆಗಾಲಕ್ಕೂ ಮುನ್ನವೇ ಈ ಬಾರಿಯ ಬೇಸಿಗೆಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಮತ್ತು ಸ್ವಚ್ಚತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ದಿನೇ ದಿನೇ ಪಟ್ಟಣ ಪಂಚಾಯತಿ ಬೆಳೆಯುತ್ತಿರುವುದರಿಂದ ನಗರಕ್ಕೆ ಯುಜಿಡಿ ಅನುಷ್ಠಾನ ಅಗತ್ಯ ಇದೆ. ಹೀಗಾಗಿ ಯುಜಿಡಿ ಯೋಜನೆಗೆ ಹಣ ಮೀಸಲಿಟ್ಟು ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟರು.

ಬಾಶೆಟ್ಟಿಹಳ್ಳಿ ವಿಎಸ್ಎಸ್ಎನ್ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಮಾತನಾಡಿ ಬಾಶೆಟ್ಟಿಹಳ್ಳಿ ಪಂ.ಪ ವ್ಯಾಪ್ತಿಯಲ್ಲಿ ಬೆರಳೆಣಿಕೆಯಷ್ಟು ಕೆರೆಗಳು ಮಾತ್ರ ಉಳಿದಿವೆ. ಉಳಿದಿರುವ ಕೆರೆಗಳಿಗೂ ಕೈಗಾರಿಕೆಗಳ ತ್ಯಾಜ್ಯ ನೀರು ಹರಿಯುತ್ತಿವೆ. ಇದರಿಂದ ಕೆರೆಗಳಲ್ಲಿ ಮೀನುಗಳು ಸಾವನ್ನಪ್ಪಿ ಕೆರೆಗಳೇ ಇಲ್ಲದಂತಾಗುತ್ತದೆ. ಕೆರೆಗಳು ಮತ್ತು ರಾಜಕಾಲುವೆಗಳು ಸೇರಿದಂತೆ ಪಟ್ಟದ ಮುಖ್ಯರಸ್ತೆಗಳಲ್ಲಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ತೆಗೆದುಕೊಂಡು ತೆರವು ಕಾರ್ಯಾಚರಣೆಯನ್ನ ಆರಂಭಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಪ.ಪಂ  ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ ಕೆರೆಯ ಸುತ್ತಮುತ್ತಲಿನ ಎಲ್ಲಾ ಕಂಪನಿ, ಕಾರ್ಖಾನೆ, ಫ್ಯಾಕ್ಟರಿಗಳಿಗೆ ನೋಟಿಸ್ ನೀಡಿ ಶೀಘ್ರವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ರಸ್ತೆಗಳ ಪಕ್ಕದಲ್ಲಿ ಒತ್ತುವರಿ ತೆರವಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.

ಅತಿಮುಖ್ಯ ಆಗ್ರಹ

1. ಬ್ಯಾಂಕ್ ಸರ್ಕಲ್ ನಲ್ಲಿನ ಪುಟ್ ಪಾತ್ ನಲ್ಲಿ ಗ್ರಿಲ್ಸ್ ಅಳವಡಿಸುವುದು.

2. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಸ್ಮಶಾನಗಳಿಗೆ ಕಾಂಪೌಂಡ್ ನಿರ್ಮಾಣ

3. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಾದುಹೋಗಿರುವ ಬೆಂಗಳೂರು-ಹಿಂದೂಪುರ ಹೆದ್ದಾರಿ ರಸ್ತೆಯಲ್ಲಿ ಪಂಚಾಯತಿ ವತಿಯಿಂದ ಸ್ವಾಗತ ಮತ್ತು ಧನ್ಯವಾದ ಕಮಾನುಗಳ ನಿರ್ಮಾಣ

4. ನೂತನವಾಗಿ ವಾಣಿಜ್ಯ ಮಳಿಗೆಗಳ ನಿರ್ಮಾಣ

5. ಬಾಶೆಟ್ಟಿಹಳ್ಳಿ ಕೆರೆಯನ್ನ ಅಭಿವೃದ್ಧಿಪಡಿಸಿ, ವಾಕಿಂಗ್ ಟ್ರ್ಯಾಕ್ ಮತ್ತು ವಿಶ್ರಾಂತಿ ಚೇರ್ ಗಳನ್ನ ಹಾಕುವುದು.

6. ಅರಣ್ಯೀಕರಣ ಮಾಡಿ ಮರಗಳನ್ನ ಹಾಕುವುದು.

7. ರಸ್ತೆ ಬದಿಗಳಲ್ಲಿನ ಒತ್ತುವರಿ ತೆರವು ಕಾರ್ಯ ಮಾಡಿ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಬೇಕು.

8. ಬೀದಿ ಬದಿ ವ್ಯಾಪಾರಿಗಳ ಗಣತಿ ಮಾಡಿ ಸುಂಕ ವಸೂಲಿ ಕ್ರಮ ಜರುಗಿಸಬೇಕು.

9. ಕೆರೆಗಳಿಗೆ ಮುಳ್ಳುತಂತಿ ಹಾಕಿ ಫೆನ್ಸಿಂಗ್ ಮಾಡಿ, ಶಾಲಾ ವಿದ್ಯಾರ್ಥಿಗಳಿಗೆ ಮೈದಾನ ನಿರ್ಮಾಣ.

10. ಲಾರಿಗಳು ರಸ್ತೆಯಲ್ಲಿ ಪಾರ್ಕ್ ಮಾಡಲಾಗುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಲಾರಿಗಳ ತೆರವಿಗೆ ಕಂಪನಿಗಳ ವಿರುದ್ಧ ಕ್ರಮಕ್ಕೆ ನೀತಿ.

11. ಪ್ರತಿ ಗ್ರಾಮಗಳಿಗೂ ಚರಂಡಿ, ರಸ್ತೆ ವ್ಯವಸ್ಥೆಯನ್ನು‌ ಸಮರ್ಪಕವಾಗಿ ಮಾಡಬೇಕು. ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳು….

ಈ ವೇಳೆ ಲೆಕ್ಕಾಧಿಕಾರಿ ಪಾಂಶುಶಿಂಧೆ, ಎಫ್.ಡಿ.ಎ ಮೇಘನಾ, ಉಮಾಶಂಕರ್, ಮುಖಂಡರಾದ ಕೃಷ್ಣಪ್ಪ, ಪ್ರೇಮಕುಮಾರ್, ಸಿ ನಾರಾಯಣಸ್ವಾಮಿ , ಮುನಿರಾಜು, ಮುನಿಚಂದ್ರ, ಅಂಬರೀಶ್, ಕೃಷ್ಣಮೂರ್ತಿ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

7 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

9 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

10 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

24 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago