ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ: ಪ.ಪಂ ಅಭಿವೃದ್ಧಿಗಾಗಿ 11 ಅಂಶಗಳ‌ ಈಡೇರಿಕೆಗಾಗಿ ಆಗ್ರಹ: ಆಗ್ರಹಾಂಶಗಳು ಇಲ್ಲಿವೆ ಓದಿ….

ಕೈಗಾರಿಕಾ ಪ್ರದೇಶದ ಕೇಂದ್ರ ಬಿಂದುವಾಗಿರುವ ಬಾಶೆಟ್ಟಿಹಳ್ಳಿ ವೃತ್ತದಲ್ಲಿ ಬಸ್ ನಿಲ್ದಾಣಗಳ ಶೆಲ್ಟರ್ ನಿರ್ಮಾಣ ಅತ್ಯಗತ್ಯವಾಗಿದೆ. ಸ್ಮಶಾನಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ವಿವಿಧ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣ ಸಾಲದು, ಮತ್ತಷ್ಟು ಹೆಚ್ಚಿಸಬೇಕು ಎಂದು ಅಂಬರೀಶ್ ಆಗ್ರಹಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಆಯ-ವ್ಯಯಕ್ಕೆ ಸಂಬಂಧಿಸಿ ಸಾರ್ವಜನಿಕರ ಪೂರ್ವಭಾವಿ ಸಭೆ ಮಂಗಳವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳೆಗಾಲಕ್ಕೂ ಮುನ್ನವೇ ಈ ಬಾರಿಯ ಬೇಸಿಗೆಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಮತ್ತು ಸ್ವಚ್ಚತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ದಿನೇ ದಿನೇ ಪಟ್ಟಣ ಪಂಚಾಯತಿ ಬೆಳೆಯುತ್ತಿರುವುದರಿಂದ ನಗರಕ್ಕೆ ಯುಜಿಡಿ ಅನುಷ್ಠಾನ ಅಗತ್ಯ ಇದೆ. ಹೀಗಾಗಿ ಯುಜಿಡಿ ಯೋಜನೆಗೆ ಹಣ ಮೀಸಲಿಟ್ಟು ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟರು.

ಬಾಶೆಟ್ಟಿಹಳ್ಳಿ ವಿಎಸ್ಎಸ್ಎನ್ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಮಾತನಾಡಿ ಬಾಶೆಟ್ಟಿಹಳ್ಳಿ ಪಂ.ಪ ವ್ಯಾಪ್ತಿಯಲ್ಲಿ ಬೆರಳೆಣಿಕೆಯಷ್ಟು ಕೆರೆಗಳು ಮಾತ್ರ ಉಳಿದಿವೆ. ಉಳಿದಿರುವ ಕೆರೆಗಳಿಗೂ ಕೈಗಾರಿಕೆಗಳ ತ್ಯಾಜ್ಯ ನೀರು ಹರಿಯುತ್ತಿವೆ. ಇದರಿಂದ ಕೆರೆಗಳಲ್ಲಿ ಮೀನುಗಳು ಸಾವನ್ನಪ್ಪಿ ಕೆರೆಗಳೇ ಇಲ್ಲದಂತಾಗುತ್ತದೆ. ಕೆರೆಗಳು ಮತ್ತು ರಾಜಕಾಲುವೆಗಳು ಸೇರಿದಂತೆ ಪಟ್ಟದ ಮುಖ್ಯರಸ್ತೆಗಳಲ್ಲಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ತೆಗೆದುಕೊಂಡು ತೆರವು ಕಾರ್ಯಾಚರಣೆಯನ್ನ ಆರಂಭಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಪ.ಪಂ  ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ ಕೆರೆಯ ಸುತ್ತಮುತ್ತಲಿನ ಎಲ್ಲಾ ಕಂಪನಿ, ಕಾರ್ಖಾನೆ, ಫ್ಯಾಕ್ಟರಿಗಳಿಗೆ ನೋಟಿಸ್ ನೀಡಿ ಶೀಘ್ರವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ರಸ್ತೆಗಳ ಪಕ್ಕದಲ್ಲಿ ಒತ್ತುವರಿ ತೆರವಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.

ಅತಿಮುಖ್ಯ ಆಗ್ರಹ

1. ಬ್ಯಾಂಕ್ ಸರ್ಕಲ್ ನಲ್ಲಿನ ಪುಟ್ ಪಾತ್ ನಲ್ಲಿ ಗ್ರಿಲ್ಸ್ ಅಳವಡಿಸುವುದು.

2. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಸ್ಮಶಾನಗಳಿಗೆ ಕಾಂಪೌಂಡ್ ನಿರ್ಮಾಣ

3. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಾದುಹೋಗಿರುವ ಬೆಂಗಳೂರು-ಹಿಂದೂಪುರ ಹೆದ್ದಾರಿ ರಸ್ತೆಯಲ್ಲಿ ಪಂಚಾಯತಿ ವತಿಯಿಂದ ಸ್ವಾಗತ ಮತ್ತು ಧನ್ಯವಾದ ಕಮಾನುಗಳ ನಿರ್ಮಾಣ

4. ನೂತನವಾಗಿ ವಾಣಿಜ್ಯ ಮಳಿಗೆಗಳ ನಿರ್ಮಾಣ

5. ಬಾಶೆಟ್ಟಿಹಳ್ಳಿ ಕೆರೆಯನ್ನ ಅಭಿವೃದ್ಧಿಪಡಿಸಿ, ವಾಕಿಂಗ್ ಟ್ರ್ಯಾಕ್ ಮತ್ತು ವಿಶ್ರಾಂತಿ ಚೇರ್ ಗಳನ್ನ ಹಾಕುವುದು.

6. ಅರಣ್ಯೀಕರಣ ಮಾಡಿ ಮರಗಳನ್ನ ಹಾಕುವುದು.

7. ರಸ್ತೆ ಬದಿಗಳಲ್ಲಿನ ಒತ್ತುವರಿ ತೆರವು ಕಾರ್ಯ ಮಾಡಿ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಬೇಕು.

8. ಬೀದಿ ಬದಿ ವ್ಯಾಪಾರಿಗಳ ಗಣತಿ ಮಾಡಿ ಸುಂಕ ವಸೂಲಿ ಕ್ರಮ ಜರುಗಿಸಬೇಕು.

9. ಕೆರೆಗಳಿಗೆ ಮುಳ್ಳುತಂತಿ ಹಾಕಿ ಫೆನ್ಸಿಂಗ್ ಮಾಡಿ, ಶಾಲಾ ವಿದ್ಯಾರ್ಥಿಗಳಿಗೆ ಮೈದಾನ ನಿರ್ಮಾಣ.

10. ಲಾರಿಗಳು ರಸ್ತೆಯಲ್ಲಿ ಪಾರ್ಕ್ ಮಾಡಲಾಗುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಲಾರಿಗಳ ತೆರವಿಗೆ ಕಂಪನಿಗಳ ವಿರುದ್ಧ ಕ್ರಮಕ್ಕೆ ನೀತಿ.

11. ಪ್ರತಿ ಗ್ರಾಮಗಳಿಗೂ ಚರಂಡಿ, ರಸ್ತೆ ವ್ಯವಸ್ಥೆಯನ್ನು‌ ಸಮರ್ಪಕವಾಗಿ ಮಾಡಬೇಕು. ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳು….

ಈ ವೇಳೆ ಲೆಕ್ಕಾಧಿಕಾರಿ ಪಾಂಶುಶಿಂಧೆ, ಎಫ್.ಡಿ.ಎ ಮೇಘನಾ, ಉಮಾಶಂಕರ್, ಮುಖಂಡರಾದ ಕೃಷ್ಣಪ್ಪ, ಪ್ರೇಮಕುಮಾರ್, ಸಿ ನಾರಾಯಣಸ್ವಾಮಿ , ಮುನಿರಾಜು, ಮುನಿಚಂದ್ರ, ಅಂಬರೀಶ್, ಕೃಷ್ಣಮೂರ್ತಿ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

5 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

10 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago