ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ: ಪ.ಪಂ ಅಭಿವೃದ್ಧಿಗಾಗಿ 11 ಅಂಶಗಳ‌ ಈಡೇರಿಕೆಗಾಗಿ ಆಗ್ರಹ: ಆಗ್ರಹಾಂಶಗಳು ಇಲ್ಲಿವೆ ಓದಿ….

ಕೈಗಾರಿಕಾ ಪ್ರದೇಶದ ಕೇಂದ್ರ ಬಿಂದುವಾಗಿರುವ ಬಾಶೆಟ್ಟಿಹಳ್ಳಿ ವೃತ್ತದಲ್ಲಿ ಬಸ್ ನಿಲ್ದಾಣಗಳ ಶೆಲ್ಟರ್ ನಿರ್ಮಾಣ ಅತ್ಯಗತ್ಯವಾಗಿದೆ. ಸ್ಮಶಾನಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ವಿವಿಧ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣ ಸಾಲದು, ಮತ್ತಷ್ಟು ಹೆಚ್ಚಿಸಬೇಕು ಎಂದು ಅಂಬರೀಶ್ ಆಗ್ರಹಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಆಯ-ವ್ಯಯಕ್ಕೆ ಸಂಬಂಧಿಸಿ ಸಾರ್ವಜನಿಕರ ಪೂರ್ವಭಾವಿ ಸಭೆ ಮಂಗಳವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳೆಗಾಲಕ್ಕೂ ಮುನ್ನವೇ ಈ ಬಾರಿಯ ಬೇಸಿಗೆಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಮತ್ತು ಸ್ವಚ್ಚತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ದಿನೇ ದಿನೇ ಪಟ್ಟಣ ಪಂಚಾಯತಿ ಬೆಳೆಯುತ್ತಿರುವುದರಿಂದ ನಗರಕ್ಕೆ ಯುಜಿಡಿ ಅನುಷ್ಠಾನ ಅಗತ್ಯ ಇದೆ. ಹೀಗಾಗಿ ಯುಜಿಡಿ ಯೋಜನೆಗೆ ಹಣ ಮೀಸಲಿಟ್ಟು ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟರು.

ಬಾಶೆಟ್ಟಿಹಳ್ಳಿ ವಿಎಸ್ಎಸ್ಎನ್ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಮಾತನಾಡಿ ಬಾಶೆಟ್ಟಿಹಳ್ಳಿ ಪಂ.ಪ ವ್ಯಾಪ್ತಿಯಲ್ಲಿ ಬೆರಳೆಣಿಕೆಯಷ್ಟು ಕೆರೆಗಳು ಮಾತ್ರ ಉಳಿದಿವೆ. ಉಳಿದಿರುವ ಕೆರೆಗಳಿಗೂ ಕೈಗಾರಿಕೆಗಳ ತ್ಯಾಜ್ಯ ನೀರು ಹರಿಯುತ್ತಿವೆ. ಇದರಿಂದ ಕೆರೆಗಳಲ್ಲಿ ಮೀನುಗಳು ಸಾವನ್ನಪ್ಪಿ ಕೆರೆಗಳೇ ಇಲ್ಲದಂತಾಗುತ್ತದೆ. ಕೆರೆಗಳು ಮತ್ತು ರಾಜಕಾಲುವೆಗಳು ಸೇರಿದಂತೆ ಪಟ್ಟದ ಮುಖ್ಯರಸ್ತೆಗಳಲ್ಲಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ತೆಗೆದುಕೊಂಡು ತೆರವು ಕಾರ್ಯಾಚರಣೆಯನ್ನ ಆರಂಭಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಪ.ಪಂ  ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ ಕೆರೆಯ ಸುತ್ತಮುತ್ತಲಿನ ಎಲ್ಲಾ ಕಂಪನಿ, ಕಾರ್ಖಾನೆ, ಫ್ಯಾಕ್ಟರಿಗಳಿಗೆ ನೋಟಿಸ್ ನೀಡಿ ಶೀಘ್ರವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ರಸ್ತೆಗಳ ಪಕ್ಕದಲ್ಲಿ ಒತ್ತುವರಿ ತೆರವಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.

ಅತಿಮುಖ್ಯ ಆಗ್ರಹ

1. ಬ್ಯಾಂಕ್ ಸರ್ಕಲ್ ನಲ್ಲಿನ ಪುಟ್ ಪಾತ್ ನಲ್ಲಿ ಗ್ರಿಲ್ಸ್ ಅಳವಡಿಸುವುದು.

2. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಸ್ಮಶಾನಗಳಿಗೆ ಕಾಂಪೌಂಡ್ ನಿರ್ಮಾಣ

3. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಾದುಹೋಗಿರುವ ಬೆಂಗಳೂರು-ಹಿಂದೂಪುರ ಹೆದ್ದಾರಿ ರಸ್ತೆಯಲ್ಲಿ ಪಂಚಾಯತಿ ವತಿಯಿಂದ ಸ್ವಾಗತ ಮತ್ತು ಧನ್ಯವಾದ ಕಮಾನುಗಳ ನಿರ್ಮಾಣ

4. ನೂತನವಾಗಿ ವಾಣಿಜ್ಯ ಮಳಿಗೆಗಳ ನಿರ್ಮಾಣ

5. ಬಾಶೆಟ್ಟಿಹಳ್ಳಿ ಕೆರೆಯನ್ನ ಅಭಿವೃದ್ಧಿಪಡಿಸಿ, ವಾಕಿಂಗ್ ಟ್ರ್ಯಾಕ್ ಮತ್ತು ವಿಶ್ರಾಂತಿ ಚೇರ್ ಗಳನ್ನ ಹಾಕುವುದು.

6. ಅರಣ್ಯೀಕರಣ ಮಾಡಿ ಮರಗಳನ್ನ ಹಾಕುವುದು.

7. ರಸ್ತೆ ಬದಿಗಳಲ್ಲಿನ ಒತ್ತುವರಿ ತೆರವು ಕಾರ್ಯ ಮಾಡಿ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಬೇಕು.

8. ಬೀದಿ ಬದಿ ವ್ಯಾಪಾರಿಗಳ ಗಣತಿ ಮಾಡಿ ಸುಂಕ ವಸೂಲಿ ಕ್ರಮ ಜರುಗಿಸಬೇಕು.

9. ಕೆರೆಗಳಿಗೆ ಮುಳ್ಳುತಂತಿ ಹಾಕಿ ಫೆನ್ಸಿಂಗ್ ಮಾಡಿ, ಶಾಲಾ ವಿದ್ಯಾರ್ಥಿಗಳಿಗೆ ಮೈದಾನ ನಿರ್ಮಾಣ.

10. ಲಾರಿಗಳು ರಸ್ತೆಯಲ್ಲಿ ಪಾರ್ಕ್ ಮಾಡಲಾಗುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಲಾರಿಗಳ ತೆರವಿಗೆ ಕಂಪನಿಗಳ ವಿರುದ್ಧ ಕ್ರಮಕ್ಕೆ ನೀತಿ.

11. ಪ್ರತಿ ಗ್ರಾಮಗಳಿಗೂ ಚರಂಡಿ, ರಸ್ತೆ ವ್ಯವಸ್ಥೆಯನ್ನು‌ ಸಮರ್ಪಕವಾಗಿ ಮಾಡಬೇಕು. ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳು….

ಈ ವೇಳೆ ಲೆಕ್ಕಾಧಿಕಾರಿ ಪಾಂಶುಶಿಂಧೆ, ಎಫ್.ಡಿ.ಎ ಮೇಘನಾ, ಉಮಾಶಂಕರ್, ಮುಖಂಡರಾದ ಕೃಷ್ಣಪ್ಪ, ಪ್ರೇಮಕುಮಾರ್, ಸಿ ನಾರಾಯಣಸ್ವಾಮಿ , ಮುನಿರಾಜು, ಮುನಿಚಂದ್ರ, ಅಂಬರೀಶ್, ಕೃಷ್ಣಮೂರ್ತಿ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

5 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

17 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

18 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

21 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

21 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago