ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ: ಪ.ಪಂ ಅಭಿವೃದ್ಧಿಗಾಗಿ 11 ಅಂಶಗಳ‌ ಈಡೇರಿಕೆಗಾಗಿ ಆಗ್ರಹ: ಆಗ್ರಹಾಂಶಗಳು ಇಲ್ಲಿವೆ ಓದಿ….

ಕೈಗಾರಿಕಾ ಪ್ರದೇಶದ ಕೇಂದ್ರ ಬಿಂದುವಾಗಿರುವ ಬಾಶೆಟ್ಟಿಹಳ್ಳಿ ವೃತ್ತದಲ್ಲಿ ಬಸ್ ನಿಲ್ದಾಣಗಳ ಶೆಲ್ಟರ್ ನಿರ್ಮಾಣ ಅತ್ಯಗತ್ಯವಾಗಿದೆ. ಸ್ಮಶಾನಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ವಿವಿಧ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಹಣ ಸಾಲದು, ಮತ್ತಷ್ಟು ಹೆಚ್ಚಿಸಬೇಕು ಎಂದು ಅಂಬರೀಶ್ ಆಗ್ರಹಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಆಯ-ವ್ಯಯಕ್ಕೆ ಸಂಬಂಧಿಸಿ ಸಾರ್ವಜನಿಕರ ಪೂರ್ವಭಾವಿ ಸಭೆ ಮಂಗಳವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳೆಗಾಲಕ್ಕೂ ಮುನ್ನವೇ ಈ ಬಾರಿಯ ಬೇಸಿಗೆಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಮತ್ತು ಸ್ವಚ್ಚತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

ದಿನೇ ದಿನೇ ಪಟ್ಟಣ ಪಂಚಾಯತಿ ಬೆಳೆಯುತ್ತಿರುವುದರಿಂದ ನಗರಕ್ಕೆ ಯುಜಿಡಿ ಅನುಷ್ಠಾನ ಅಗತ್ಯ ಇದೆ. ಹೀಗಾಗಿ ಯುಜಿಡಿ ಯೋಜನೆಗೆ ಹಣ ಮೀಸಲಿಟ್ಟು ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟರು.

ಬಾಶೆಟ್ಟಿಹಳ್ಳಿ ವಿಎಸ್ಎಸ್ಎನ್ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಮಾತನಾಡಿ ಬಾಶೆಟ್ಟಿಹಳ್ಳಿ ಪಂ.ಪ ವ್ಯಾಪ್ತಿಯಲ್ಲಿ ಬೆರಳೆಣಿಕೆಯಷ್ಟು ಕೆರೆಗಳು ಮಾತ್ರ ಉಳಿದಿವೆ. ಉಳಿದಿರುವ ಕೆರೆಗಳಿಗೂ ಕೈಗಾರಿಕೆಗಳ ತ್ಯಾಜ್ಯ ನೀರು ಹರಿಯುತ್ತಿವೆ. ಇದರಿಂದ ಕೆರೆಗಳಲ್ಲಿ ಮೀನುಗಳು ಸಾವನ್ನಪ್ಪಿ ಕೆರೆಗಳೇ ಇಲ್ಲದಂತಾಗುತ್ತದೆ. ಕೆರೆಗಳು ಮತ್ತು ರಾಜಕಾಲುವೆಗಳು ಸೇರಿದಂತೆ ಪಟ್ಟದ ಮುಖ್ಯರಸ್ತೆಗಳಲ್ಲಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ ತೆಗೆದುಕೊಂಡು ತೆರವು ಕಾರ್ಯಾಚರಣೆಯನ್ನ ಆರಂಭಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಪ.ಪಂ  ಮುಖ್ಯಾಧಿಕಾರಿ ಪಿ.ನರಸಿಂಹಮೂರ್ತಿ ಕೆರೆಯ ಸುತ್ತಮುತ್ತಲಿನ ಎಲ್ಲಾ ಕಂಪನಿ, ಕಾರ್ಖಾನೆ, ಫ್ಯಾಕ್ಟರಿಗಳಿಗೆ ನೋಟಿಸ್ ನೀಡಿ ಶೀಘ್ರವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ರಸ್ತೆಗಳ ಪಕ್ಕದಲ್ಲಿ ಒತ್ತುವರಿ ತೆರವಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.

ಅತಿಮುಖ್ಯ ಆಗ್ರಹ

1. ಬ್ಯಾಂಕ್ ಸರ್ಕಲ್ ನಲ್ಲಿನ ಪುಟ್ ಪಾತ್ ನಲ್ಲಿ ಗ್ರಿಲ್ಸ್ ಅಳವಡಿಸುವುದು.

2. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿನ ಸ್ಮಶಾನಗಳಿಗೆ ಕಾಂಪೌಂಡ್ ನಿರ್ಮಾಣ

3. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಾದುಹೋಗಿರುವ ಬೆಂಗಳೂರು-ಹಿಂದೂಪುರ ಹೆದ್ದಾರಿ ರಸ್ತೆಯಲ್ಲಿ ಪಂಚಾಯತಿ ವತಿಯಿಂದ ಸ್ವಾಗತ ಮತ್ತು ಧನ್ಯವಾದ ಕಮಾನುಗಳ ನಿರ್ಮಾಣ

4. ನೂತನವಾಗಿ ವಾಣಿಜ್ಯ ಮಳಿಗೆಗಳ ನಿರ್ಮಾಣ

5. ಬಾಶೆಟ್ಟಿಹಳ್ಳಿ ಕೆರೆಯನ್ನ ಅಭಿವೃದ್ಧಿಪಡಿಸಿ, ವಾಕಿಂಗ್ ಟ್ರ್ಯಾಕ್ ಮತ್ತು ವಿಶ್ರಾಂತಿ ಚೇರ್ ಗಳನ್ನ ಹಾಕುವುದು.

6. ಅರಣ್ಯೀಕರಣ ಮಾಡಿ ಮರಗಳನ್ನ ಹಾಕುವುದು.

7. ರಸ್ತೆ ಬದಿಗಳಲ್ಲಿನ ಒತ್ತುವರಿ ತೆರವು ಕಾರ್ಯ ಮಾಡಿ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಬೇಕು.

8. ಬೀದಿ ಬದಿ ವ್ಯಾಪಾರಿಗಳ ಗಣತಿ ಮಾಡಿ ಸುಂಕ ವಸೂಲಿ ಕ್ರಮ ಜರುಗಿಸಬೇಕು.

9. ಕೆರೆಗಳಿಗೆ ಮುಳ್ಳುತಂತಿ ಹಾಕಿ ಫೆನ್ಸಿಂಗ್ ಮಾಡಿ, ಶಾಲಾ ವಿದ್ಯಾರ್ಥಿಗಳಿಗೆ ಮೈದಾನ ನಿರ್ಮಾಣ.

10. ಲಾರಿಗಳು ರಸ್ತೆಯಲ್ಲಿ ಪಾರ್ಕ್ ಮಾಡಲಾಗುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಲಾರಿಗಳ ತೆರವಿಗೆ ಕಂಪನಿಗಳ ವಿರುದ್ಧ ಕ್ರಮಕ್ಕೆ ನೀತಿ.

11. ಪ್ರತಿ ಗ್ರಾಮಗಳಿಗೂ ಚರಂಡಿ, ರಸ್ತೆ ವ್ಯವಸ್ಥೆಯನ್ನು‌ ಸಮರ್ಪಕವಾಗಿ ಮಾಡಬೇಕು. ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳು….

ಈ ವೇಳೆ ಲೆಕ್ಕಾಧಿಕಾರಿ ಪಾಂಶುಶಿಂಧೆ, ಎಫ್.ಡಿ.ಎ ಮೇಘನಾ, ಉಮಾಶಂಕರ್, ಮುಖಂಡರಾದ ಕೃಷ್ಣಪ್ಪ, ಪ್ರೇಮಕುಮಾರ್, ಸಿ ನಾರಾಯಣಸ್ವಾಮಿ , ಮುನಿರಾಜು, ಮುನಿಚಂದ್ರ, ಅಂಬರೀಶ್, ಕೃಷ್ಣಮೂರ್ತಿ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

1 hour ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago