ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ ಅಪೂರ್ಣ; ಮುಖ್ಯಾಧಿಕಾರಿ ಕಾರ್ಯವೈಖರಿಗೆ ತೀವ್ರ ಅಸಮಾಧಾನಗೊಂಡ ಸಾರ್ವಜನಿಕರು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.

ಪಟ್ಟಣ ಪಂಚಾಯತಿಯಾಗಿ ಎರಡು ವರ್ಷ ಕಳೆದಿದೆ. ಕಳೆದ ಬಜೆಟ್ ನಲ್ಲಿ ಘೋಷಿಸಿದ ಯಾವುದೇ ಒಂದು ಯೋಜನೆ ಜಾರಿಯಾಗಿಲ್ಲ. ಕನಿಷ್ಠ ಮೂಲಭೂತ ಸೌಕರ್ಯಗಳ ಒದಗಿಸುವಲ್ಲಿಯೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.

ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.

ಪ.ಪಂ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಈ ಅಧಿಕಾರಿಯನ್ನು ಒಂದು ವಾರದಲ್ಲಿ ಬದಲಾಯಿಸದಿದ್ದರೆ ಪಂಚಾಯತಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು. ಈ ನಿರರ್ಥಕ ಬಜೆಟ್ ನಮಗೆ ಬೇಕಾಗಿಲ್ಲ ಎಂದು ಬಜೆಟ್ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

1 hour ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

2 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

10 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago